ಬ್ರೇಕಿಂಗ್ ನ್ಯೂಸ್
27-06-21 01:36 pm Headline Karnataka News Network ದೇಶ - ವಿದೇಶ
ಶ್ರೀನಗರ್, ಜೂನ್ 27: ಜಮ್ಮು ವಿಮಾನ ನಿಲ್ದಾಣದಲ್ಲಿ ಕೇವಲ ಐದು ನಿಮಿಷಗಳ ಅಂತರದಲ್ಲಿ ಸಂಭವಿಸಿದ ಎರಡು ಸ್ಫೋಟಗಳ ಬೆನ್ನಲ್ಲೇ ಡ್ರೋನ್ ದಾಳಿ ಬಗ್ಗೆ ಭಾರತೀಯ ವಾಯು ಪಡೆ ಸಿಬ್ಬಂದಿ ತನಿಖೆ ಶುರು ಮಾಡಿದ್ದಾರೆ. ಎರಡು ಕಡಿಮೆ ತೀವ್ರತೆಯ ಸ್ಫೋಟ ಭಯೋತ್ಪಾದಕ ದಾಳಿಯೇ ಎಂಬ ಆಯಾಮದಲ್ಲಿ ರಕ್ಷಣಾ ಮತ್ತು ಭದ್ರತಾ ಕೇಂದ್ರದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ರಾಷ್ಟ್ರೀಯ ಬಾಂಬ್ ದತ್ತಾಂಶ ಕೇಂದ್ರ ತಜ್ಞರು, ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ದೌಡಾಯಿಸಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಭಾನುವಾರ ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದಿರುವ ಎರಡು ಸ್ಫೋಟಗಳ ಗಂಭೀರತೆಯನ್ನು ಅರಿತುಕೊಂಡು ಕೇಂದ್ರ ತನಿಖಾ ತಂಡವೇ ಪ್ರಕರಣದ ತನಿಖೆಗೆ ಮುಂದಾಗಿದೆ. 'ವಾಯು ಪಡೆ ಮುಖ್ಯಸ್ಥ ಏರ್ ಮಾರ್ಷಲ್ ಹೆಚ್.ಎಸ್ ಅರೋರಾ ಮತ್ತು ಏರ್ ಮಾರ್ಷಲ್ ವಿಕ್ರಮ್ ಸಿಂಗ್ ಜೊತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಚರ್ಚೆ ನಡೆಸಿದ್ದು, ಇಬ್ಬರು ಅಧಿಕಾರಿಗಳು ಘಟನೆ ನಡೆದ ಸ್ಥಳಕ್ಕೆ ತೆರಳಿದ್ದಾರೆ,' ಎಂದು ಸಚಿವಾಲಯವು ಸ್ಪಷ್ಟಪಡಿಸಿದೆ.
ಸತ್ವಾರಿ ಪ್ರದೇಶದ ಜಮ್ಮು ವಿಮಾನ ನಿಲ್ದಾಣದ ರನ್ ವೇ ಮತ್ತು ವಾಯು ಸಂಚಾರವನ್ನು ಭಾರತೀಯ ವಾಯು ಪಡೆ ನಿಯಂತ್ರಿಸುತ್ತಿದೆ. ಪ್ರಯಾಣಿಕರನ್ನು ಹೊಂದಿರುವ ವಿಮಾನಗಳ ಹಾರಾಟವನ್ನು ಸಹ ನಿರ್ವಹಿಸಲಾಗುತ್ತದೆ.
Two low intensity explosions were reported early Sunday morning in the technical area of Jammu Air Force Station. One caused minor damage to the roof of a building while the other exploded in an open area.
— Indian Air Force (@IAF_MCC) June 27, 2021
Two low intensity explosions were reported early Sunday morning in the technical area of Jammu Air Force Station. One caused minor damage to the roof of a building while the other exploded in an open area.
08-05-24 04:37 pm
Bangalore Correspondent
C P Yogeshwara slams Dk Shivakumar: ಬಾಲ್ಯದಲ್ಲ...
08-05-24 04:28 pm
ಉಪ್ಪು ತಿಂದವನು ನೀರು ಕುಡಿಬೇಕು ಎಂದವರು ಈಗ ಯಾಕೆ ಉರ...
08-05-24 01:03 pm
DK Shivakumar, HD Kumarasway, Prajwal case:...
07-05-24 09:11 pm
Lok Sabha Elections 2024, Uttar Karnataka Vot...
07-05-24 07:11 pm
08-05-24 11:59 am
HK News Desk
ಹೈದರಾಬಾದ್ ; ಭಾರೀ ಮಳೆಗೆ ಗೋಡೆ ಕುಸಿತ, 4 ವರ್ಷದ ಮಗ...
08-05-24 10:44 am
Cyber crime, gold biscut: ಸೈಬರ್ ವಂಚಕನಿಗೆ ಸೇರಿ...
07-05-24 10:26 pm
Solapur Lok Sabha Constituency, Maharashtra,...
07-05-24 08:38 pm
Ram Mandir, Rahul Gandhi, Acharya Pramod Kris...
07-05-24 05:16 pm
08-05-24 10:48 pm
Mangalore Correspondent
Mangalore Vasantha Bangera death: ವಸಂತ ಬಂಗೇರ...
08-05-24 10:37 pm
Explosion at firecracker: ಕಾರ್ಕಳ ; ಸಿಡಿಮದ್ದು...
08-05-24 08:44 pm
Mangalore suicide, College student: ಬಿಇ ಇಂಜಿನ...
08-05-24 08:11 pm
Congress Vasantha Bangera death: ಬೆಳ್ತಂಗಡಿಯ ಹ...
08-05-24 06:19 pm
08-05-24 04:35 pm
Bengaluru Correspondent
ಹಲ್ಲಿನ ಚಿಕಿತ್ಸೆಗೆ ಬಂದು ಮೆಡಿಕಲ್ ಕಾಲೇಜಿನ ಟಾಯ್ಲೆ...
08-05-24 11:33 am
ಆನ್ಲೈನ್ ಗೇಮಿಂಗ್ ಗಾಗಿ 2 ಸಾವಿರ ರೂ. ಸಾಲ, ದುಡ್ಡ...
07-05-24 10:03 pm
Bangalore Cyber crime: ಸ್ಟಾಕ್ ಮಾರ್ಕೆಟ್ ಹೂಡಿಕೆ...
07-05-24 09:48 pm
Bangalore crime, Robbery: ಊರಿಗೆ ಹೋದ್ಲು ಅಕ್ಕ ;...
07-05-24 02:57 pm