ಬ್ರೇಕಿಂಗ್ ನ್ಯೂಸ್
29-06-21 12:44 pm Headline Karnataka News Network ದೇಶ - ವಿದೇಶ
ಶ್ರೀನಗರ, ಜೂನ್ 29: ಶ್ರೀನಗರದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಅಬ್ರಾರ್ ಎಂಬಾತನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಶ್ರೀನಗರದ ಮಲ್ಹೋರಾ ಪರಿಂಪೋರಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಪರಿಂಪೋರಾದಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಉಗ್ರರು ಶಸ್ತ್ರಾಸ್ತ್ರಗಳನ್ನು ಹೆದ್ದಾರಿಗೆ ಸಾಗಿಸುತ್ತಿರುವ ಕುರಿತು ಪೊಲೀಸರಿಗೆ ದೊರೆತ ಮಾಹಿತಿ ಆಧಾರದ ಮೇಲೆ ಜೆಕೆಪಿ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ನಿಯೋಜಿಸಿ ಪರಿಶೀಲನೆ ನಡೆಸಲಾಗಿತ್ತು.
ಪರಿಂಪೊರಾ ನಾಕಾ ಬಳಿ ಬರುತ್ತಿದ್ದ ವಾಹನವನ್ನು ತಡೆಹಿಡಿದು ವಿಚಾರಿಸಿದ್ದು, ಹಿಂದೆ ಕುಳಿತಿದ್ದ ವ್ಯಕ್ತಿ ಬ್ಯಾಗ್ನಲ್ಲಿ ಗ್ರೆನೇಡ್ ಇದ್ದದ್ದು ಕಂಡುಬಂದಿತ್ತು. ಕೂಡಲೇ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು" ಎಂದು ಮಾಹಿತಿ ನೀಡಿದ್ದಾರೆ.
ವಿಚಾರಣೆಯಲ್ಲಿ, ಅವರ ಬಳಿ ಎಕೆ 47 ಶಸ್ತ್ರಾಸ್ತ್ರಗಳಿದ್ದು, ಅದನ್ನು ಅಡಗಿಸಿಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಬಂಧಿತರೊಂದಿಗೆ ಮಲ್ಹೋರಾದ ಮನೆಯೊಂದಕ್ಕೆ ಭದ್ರತಾ ಸಿಬ್ಬಂದಿ ತೆರಳಿದ್ದು, ಆ ಸಂದರ್ಭ ಪೊಲೀಸರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಈ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಸಿಬ್ಬಂದಿಗೆ ಗಾಯವಾಗಿದೆ. ಅಬ್ರಾರ್ ಎಂಬ ಎಲ್ಇಟಿ ಕಮಾಂಡರ್ ಸೇರಿದಂತೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆಂದು ತಿಳಿಸಿದ್ದಾರೆ.
Kashmir encounter: IGP Kashmir zone Vijay Kumar had said on Monday that LeT commander Nadeem Abrar was involved in "several killings" and that his arrest was a "big success" for the police forces.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm