ಬ್ರೇಕಿಂಗ್ ನ್ಯೂಸ್
29-06-21 12:44 pm Headline Karnataka News Network ದೇಶ - ವಿದೇಶ
ಶ್ರೀನಗರ, ಜೂನ್ 29: ಶ್ರೀನಗರದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಅಬ್ರಾರ್ ಎಂಬಾತನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಶ್ರೀನಗರದ ಮಲ್ಹೋರಾ ಪರಿಂಪೋರಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಪರಿಂಪೋರಾದಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಉಗ್ರರು ಶಸ್ತ್ರಾಸ್ತ್ರಗಳನ್ನು ಹೆದ್ದಾರಿಗೆ ಸಾಗಿಸುತ್ತಿರುವ ಕುರಿತು ಪೊಲೀಸರಿಗೆ ದೊರೆತ ಮಾಹಿತಿ ಆಧಾರದ ಮೇಲೆ ಜೆಕೆಪಿ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ನಿಯೋಜಿಸಿ ಪರಿಶೀಲನೆ ನಡೆಸಲಾಗಿತ್ತು.

ಪರಿಂಪೊರಾ ನಾಕಾ ಬಳಿ ಬರುತ್ತಿದ್ದ ವಾಹನವನ್ನು ತಡೆಹಿಡಿದು ವಿಚಾರಿಸಿದ್ದು, ಹಿಂದೆ ಕುಳಿತಿದ್ದ ವ್ಯಕ್ತಿ ಬ್ಯಾಗ್ನಲ್ಲಿ ಗ್ರೆನೇಡ್ ಇದ್ದದ್ದು ಕಂಡುಬಂದಿತ್ತು. ಕೂಡಲೇ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು" ಎಂದು ಮಾಹಿತಿ ನೀಡಿದ್ದಾರೆ.
ವಿಚಾರಣೆಯಲ್ಲಿ, ಅವರ ಬಳಿ ಎಕೆ 47 ಶಸ್ತ್ರಾಸ್ತ್ರಗಳಿದ್ದು, ಅದನ್ನು ಅಡಗಿಸಿಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಬಂಧಿತರೊಂದಿಗೆ ಮಲ್ಹೋರಾದ ಮನೆಯೊಂದಕ್ಕೆ ಭದ್ರತಾ ಸಿಬ್ಬಂದಿ ತೆರಳಿದ್ದು, ಆ ಸಂದರ್ಭ ಪೊಲೀಸರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಈ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಸಿಬ್ಬಂದಿಗೆ ಗಾಯವಾಗಿದೆ. ಅಬ್ರಾರ್ ಎಂಬ ಎಲ್ಇಟಿ ಕಮಾಂಡರ್ ಸೇರಿದಂತೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆಂದು ತಿಳಿಸಿದ್ದಾರೆ.
Kashmir encounter: IGP Kashmir zone Vijay Kumar had said on Monday that LeT commander Nadeem Abrar was involved in "several killings" and that his arrest was a "big success" for the police forces.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm