ಡಿಜೆ ಹಳ್ಳಿ, ಕೆಜಿಹಳ್ಳಿ ಗಲಭೆ ; ಎಸ್‍ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ

01-09-20 03:27 pm       Bangalore Correspondent   ದೇಶ - ವಿದೇಶ

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ಮೂರು ಪ್ರಕರಣಗಳ ಸಿಸಿಬಿ ವರ್ಗಾವಣೆ ಆಗಿದ್ದು, ಸಿಸಿಬಿ ಅಧಿಕಾರಿಗಳ ತಂಡ ಎಸ್‍ಡಿಪಿಐ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಬೆಂಗಳೂರು, ಸೆಪ್ಟೆಂಬರ್ 1: ನಗರದ ಡಿಜೆಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ಸಿಸಿಬಿ ಅಧಿಕಾರಿಗಳ ತಂಡ ಎಸ್‍ಡಿಪಿಐ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು, ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ಮೂರು ಪ್ರಕರಣಗಳ ಸಿಸಿಬಿ ವರ್ಗಾವಣೆ ಆಗಿದ್ದವು. ಅದರ ಸಂಬಂಧ ಎಸಿಪಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೀಗಾಗಿ ತನಿಖೆ ಭಾಗವಾಗಿ ಮೂರು ಎಸ್‍ಡಿಪಿಐ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ದಾಳಿ ಮುಂದುವರಿದಿದ್ದು, ಈಗ ತನಿಖಾ ಹಂತದಲ್ಲಿದ್ದು ಹೆಚ್ಚಿನ ವಿಚಾರಗಳನ್ನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಏಕಕಾಲಕ್ಕೆ ಮೂರು ಕಡೆಗಳಲ್ಲೂ ದಾಳಿಯಾಗಿದೆ. ಸುಮಾರು 30ಕ್ಕೂ ಹೆಚ್ಚು ಅಧಿಕಾರಿಗಳ ತಂಡಗಳಿಂದ ಮೂರು ಕಡೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಹಲಸೂರು ಗೇಟ್‍ನ ಎಸ್‍ಡಿಪಿಐನ ಮುಖ್ಯ ಕಚೇರಿ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.