ಬ್ರೇಕಿಂಗ್ ನ್ಯೂಸ್
01-09-20 04:54 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಸೆಪ್ಟೆಂಬರ್ 1: ದೇಶದ ಮೊಟ್ಟಮೊದಲ ಹೃದಯ ರೋಗ ತಜ್ಞೆಯಾಗಿದ್ದ ಪದ್ಮಾವತಿ ಅಯ್ಯರ್ ತಮ್ಮ 103ನೇ ವಯಸ್ಸಿನಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಮ್ಯಾನ್ಮಾರ್ನಲ್ಲಿ ಜನಿಸಿದ ಪದ್ಮಾವತಿ, ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಜಪಾನ್ ಸೇನೆ ದಾಳಿ ನಡೆಸಿದ ಕಾರಣಕ್ಕೆ ಭಾರತಕ್ಕೆ ಬಂದು ನೆಲೆಸಿದ್ದರು. ದೇಶದ ಪ್ರಪ್ರಥಮ ಮಹಿಳಾ ಹೃದ್ರೋಗ ತಜ್ಞೆ ಎಂಬ ಖ್ಯಾತಿಗೆ ಇವರು ಪಾತ್ರರಾಗಿದ್ದರು.
ಹನ್ನೊಂದು ದಿನಗಳ ಹಿಂದೆ ಕೋವಿಡ್-19 ಸೋಂಕು ಕಂಡುಬಂದ ಇವರನ್ನು ದೆಹಲಿಯ ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ (ಎನ್ಎಚ್ಐ)ಗೆ ದಾಖಲಿಸಲಾಗಿತ್ತು. 1981ರಲ್ಲಿ ಈ ಸಂಸ್ಥೆಯನ್ನು ಸ್ವತಃ ಇವರೇ ಆರಂಭಿಸಿದ್ದರು.
ಕಳೆದ ಐದು ವರ್ಷಗಳಿಂದ ವ್ಹೀಲ್ಚೇರ್ ನೆರವಿನಲ್ಲಿ ಆಚೀಚೆ ಹೋಗುತ್ತಿದ್ದರೂ, ಮಾನಸಿಕವಾಗಿ ಸ್ಥಿರತೆ ಕಾಯ್ದುಕೊಂಡಿದ್ದರು. ಹೃದಯ ರೋಗದ ಬಗ್ಗೆ, ತಾವು ಸ್ಥಾಪಿಸಿದ ಹಾರ್ಟ್ ಇನ್ಸ್ಟಿಟ್ಯೂಟ್ ಬಗ್ಗೆ ಸ್ಪಷ್ಟ ಮಾಹಿತಿಗಳು ಅವರಲ್ಲಿದ್ದವು ಎಂದು ಎನ್ಎಚ್ಐ ಸಿಇಓ ಡಾ.ಓ.ಪಿ. ಯಾದವ್ ಹೇಳಿದ್ದಾರೆ.
"ಹೃದ್ರೋಗಶಾಸ್ತ್ರದ ಅಜ್ಜಿ" ಎಂದೇ ಗುರುತಿಸಲ್ಪಟ್ಟಿದ್ದ ಪದ್ಮಾವತಿ ಅಯ್ಯರ್, ಸೋಂಕಿಗೆ ಹೃದಯ ಕವಾಟ ಹಾನಿಗೀಡಾಗುವ ರುಮೇಟಿಕ್ ಹೃದ್ರೋಗ ಕ್ಷೇತ್ರದಲ್ಲಿ ಆಳವಾದ ಅಧ್ಯಯನ ಕೈಗೊಂಡಿದ್ದರು. ರಂಗೂಲ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಪದ್ಮಾವತಿ, ಸ್ಟಾಕ್ಹೋಂನ ಸೋದೆರ್ಶ್ಚೂಸೆಟ್ ಆಸ್ಪತ್ರೆ, ಅಮೆರಿಕದ ಜಾನ್ ಹಾಕಿನ್ಸ್ ಮತ್ತು ಹಾರ್ವಡ್ ಮೆಡಿಕಲ್ ಸ್ಕೂಲ್ನಲ್ಲಿ ತರಬೇತಿ ಪಡೆದಿದ್ದರು. ಇವರು ಲಂಡನ್ನ ರಾಯಲ್ ಕಾಲೇಜ್ ಆಫ್ ಫಿಸೀಶಿಯನ್ಸ್ನ ಫೆಲೋ ಕೂಡ ಆಗಿದ್ದರು. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮವಿಭೂಷಣ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm