ಬ್ರೇಕಿಂಗ್ ನ್ಯೂಸ್
01-09-20 04:54 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಸೆಪ್ಟೆಂಬರ್ 1: ದೇಶದ ಮೊಟ್ಟಮೊದಲ ಹೃದಯ ರೋಗ ತಜ್ಞೆಯಾಗಿದ್ದ ಪದ್ಮಾವತಿ ಅಯ್ಯರ್ ತಮ್ಮ 103ನೇ ವಯಸ್ಸಿನಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಮ್ಯಾನ್ಮಾರ್ನಲ್ಲಿ ಜನಿಸಿದ ಪದ್ಮಾವತಿ, ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಜಪಾನ್ ಸೇನೆ ದಾಳಿ ನಡೆಸಿದ ಕಾರಣಕ್ಕೆ ಭಾರತಕ್ಕೆ ಬಂದು ನೆಲೆಸಿದ್ದರು. ದೇಶದ ಪ್ರಪ್ರಥಮ ಮಹಿಳಾ ಹೃದ್ರೋಗ ತಜ್ಞೆ ಎಂಬ ಖ್ಯಾತಿಗೆ ಇವರು ಪಾತ್ರರಾಗಿದ್ದರು.
ಹನ್ನೊಂದು ದಿನಗಳ ಹಿಂದೆ ಕೋವಿಡ್-19 ಸೋಂಕು ಕಂಡುಬಂದ ಇವರನ್ನು ದೆಹಲಿಯ ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ (ಎನ್ಎಚ್ಐ)ಗೆ ದಾಖಲಿಸಲಾಗಿತ್ತು. 1981ರಲ್ಲಿ ಈ ಸಂಸ್ಥೆಯನ್ನು ಸ್ವತಃ ಇವರೇ ಆರಂಭಿಸಿದ್ದರು.
ಕಳೆದ ಐದು ವರ್ಷಗಳಿಂದ ವ್ಹೀಲ್ಚೇರ್ ನೆರವಿನಲ್ಲಿ ಆಚೀಚೆ ಹೋಗುತ್ತಿದ್ದರೂ, ಮಾನಸಿಕವಾಗಿ ಸ್ಥಿರತೆ ಕಾಯ್ದುಕೊಂಡಿದ್ದರು. ಹೃದಯ ರೋಗದ ಬಗ್ಗೆ, ತಾವು ಸ್ಥಾಪಿಸಿದ ಹಾರ್ಟ್ ಇನ್ಸ್ಟಿಟ್ಯೂಟ್ ಬಗ್ಗೆ ಸ್ಪಷ್ಟ ಮಾಹಿತಿಗಳು ಅವರಲ್ಲಿದ್ದವು ಎಂದು ಎನ್ಎಚ್ಐ ಸಿಇಓ ಡಾ.ಓ.ಪಿ. ಯಾದವ್ ಹೇಳಿದ್ದಾರೆ.
"ಹೃದ್ರೋಗಶಾಸ್ತ್ರದ ಅಜ್ಜಿ" ಎಂದೇ ಗುರುತಿಸಲ್ಪಟ್ಟಿದ್ದ ಪದ್ಮಾವತಿ ಅಯ್ಯರ್, ಸೋಂಕಿಗೆ ಹೃದಯ ಕವಾಟ ಹಾನಿಗೀಡಾಗುವ ರುಮೇಟಿಕ್ ಹೃದ್ರೋಗ ಕ್ಷೇತ್ರದಲ್ಲಿ ಆಳವಾದ ಅಧ್ಯಯನ ಕೈಗೊಂಡಿದ್ದರು. ರಂಗೂಲ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಪದ್ಮಾವತಿ, ಸ್ಟಾಕ್ಹೋಂನ ಸೋದೆರ್ಶ್ಚೂಸೆಟ್ ಆಸ್ಪತ್ರೆ, ಅಮೆರಿಕದ ಜಾನ್ ಹಾಕಿನ್ಸ್ ಮತ್ತು ಹಾರ್ವಡ್ ಮೆಡಿಕಲ್ ಸ್ಕೂಲ್ನಲ್ಲಿ ತರಬೇತಿ ಪಡೆದಿದ್ದರು. ಇವರು ಲಂಡನ್ನ ರಾಯಲ್ ಕಾಲೇಜ್ ಆಫ್ ಫಿಸೀಶಿಯನ್ಸ್ನ ಫೆಲೋ ಕೂಡ ಆಗಿದ್ದರು. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮವಿಭೂಷಣ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm