ಬ್ರೇಕಿಂಗ್ ನ್ಯೂಸ್
01-07-21 11:58 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 01: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಗುರುವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇದು ಮತ್ತೊಂದು ಹೊರೆಯಾಗಲಿದೆ.
14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಏರಿಕೆ ಮಾಡಿದ್ದು, ನವದೆಹಲಿಯಲ್ಲಿ ಅನಿಲ ಸಿಲಿಂಡರ್ ಬೆಲೆ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ. 19 ಕೆ.ಜಿ ತೂಕದ ಸಿಲಿಂಡರ್ ಬೆಲೆಯನ್ನು 76 ರೂಪಾಯಿಗೆ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,550ರೂಗೆ ತಲುಪಿದೆ.
ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅನಿಲ ಸಿಲಿಂಡರ್ಗಳ ಬೆಲೆ ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆ ಮಾಡಬೇಕೇ ಬೇಡವೇ ಎಂಬುದನ್ನು ನಿರ್ಧರಿಸುತ್ತವೆ.

ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಏಪ್ರಿಲ್ನಲ್ಲಿ 10ರೂ ಬೆಲೆ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಯಾವುದೇ ಪರಿಷ್ಕರಣೆ ಮಾಡಿರಲಿಲ್ಲ. ಇದೀಗ ಜುಲೈ ತಿಂಗಳಿನಲ್ಲಿ 25.50 ರೂ ಬೆಲೆ ಏರಿಕೆ ಮಾಡಲಾಗಿದೆ.

ಮೆಟ್ರೋ ಸಿಟಿಗಳಲ್ಲಿ ಎಲ್ಪಿಜಿ ಸಿಲಿಂಡರ್ ದರ ಹೀಗಿದೆ:
ನವದೆಹಲಿಯಲ್ಲಿ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ.ಮುಂಬೈನಲ್ಲಿ ಕೂಡ 834.50 ರೂಪಾಯಿಗೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ 812 ರೂ ಇದ್ದದ್ದು ಈಗ 836.50 ರೂಗೆ ಹೆಚ್ಚಳವಾಗಿದೆ.ಕೋಲ್ಕತ್ತಾದಲ್ಲಿ 835.50 ರೂ ಇದ್ದ ಸಿಲಿಂಡರ್ ಬೆಲೆ ಈಗ 861 ರೂಪಾಯಿಗೆ ಏರಿಕೆಯಾಗಿದೆ.
The price of non-subsidized LPG cylinders has been hiked by ₹25 effective from July 1. A domestic cylinder weighing 14.2 kg will now cost ₹834.50 in Delhi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm