ಬ್ರೇಕಿಂಗ್ ನ್ಯೂಸ್
01-07-21 11:58 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 01: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಗುರುವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇದು ಮತ್ತೊಂದು ಹೊರೆಯಾಗಲಿದೆ.
14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಏರಿಕೆ ಮಾಡಿದ್ದು, ನವದೆಹಲಿಯಲ್ಲಿ ಅನಿಲ ಸಿಲಿಂಡರ್ ಬೆಲೆ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ. 19 ಕೆ.ಜಿ ತೂಕದ ಸಿಲಿಂಡರ್ ಬೆಲೆಯನ್ನು 76 ರೂಪಾಯಿಗೆ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,550ರೂಗೆ ತಲುಪಿದೆ.
ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅನಿಲ ಸಿಲಿಂಡರ್ಗಳ ಬೆಲೆ ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆ ಮಾಡಬೇಕೇ ಬೇಡವೇ ಎಂಬುದನ್ನು ನಿರ್ಧರಿಸುತ್ತವೆ.

ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಏಪ್ರಿಲ್ನಲ್ಲಿ 10ರೂ ಬೆಲೆ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಯಾವುದೇ ಪರಿಷ್ಕರಣೆ ಮಾಡಿರಲಿಲ್ಲ. ಇದೀಗ ಜುಲೈ ತಿಂಗಳಿನಲ್ಲಿ 25.50 ರೂ ಬೆಲೆ ಏರಿಕೆ ಮಾಡಲಾಗಿದೆ.

ಮೆಟ್ರೋ ಸಿಟಿಗಳಲ್ಲಿ ಎಲ್ಪಿಜಿ ಸಿಲಿಂಡರ್ ದರ ಹೀಗಿದೆ:
ನವದೆಹಲಿಯಲ್ಲಿ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ.ಮುಂಬೈನಲ್ಲಿ ಕೂಡ 834.50 ರೂಪಾಯಿಗೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ 812 ರೂ ಇದ್ದದ್ದು ಈಗ 836.50 ರೂಗೆ ಹೆಚ್ಚಳವಾಗಿದೆ.ಕೋಲ್ಕತ್ತಾದಲ್ಲಿ 835.50 ರೂ ಇದ್ದ ಸಿಲಿಂಡರ್ ಬೆಲೆ ಈಗ 861 ರೂಪಾಯಿಗೆ ಏರಿಕೆಯಾಗಿದೆ.
The price of non-subsidized LPG cylinders has been hiked by ₹25 effective from July 1. A domestic cylinder weighing 14.2 kg will now cost ₹834.50 in Delhi.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am