ಬ್ರೇಕಿಂಗ್ ನ್ಯೂಸ್
01-07-21 03:09 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 1: ಜಮ್ಮುವಿನ ವಾಯುನೆಲೆಗೆ ಡ್ರೋಣ್ ದಾಳಿ ನಡೆಸಿದ ಬೆನ್ನಲ್ಲೇ ದೇಶದಲ್ಲಿ ಡ್ರೋಣ್ ಬಳಕೆ ವಿಚಾರದಲ್ಲಿ ಕಟ್ಟುನಿಟ್ಟು ತರಲು ಕೇಂದ್ರ ಸರಕಾರ ಮುಂದಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಭದ್ರತೆ ವಿಚಾರ ಮುಂದಿಟ್ಟು ಡ್ರೋಣ್ ನೀತಿಯನ್ನು ರೂಪಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಕುರಿತು ಮಾತುಕತೆ ನಡೆಸಿದ್ದಾರೆ. ಜಮ್ಮು ವಾಯುನೆಲೆಯ ಮೇಲೆ ಡ್ರೋಣ್ ದಾಳಿ ಮತ್ತು ನಂತರದ ಘಟಾನವಳಿ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದೆ. ನಾಗರಿಕ ಬಳಕೆಗಾಗಿ ಡ್ರೋಣ್ ಕ್ಯಾಮರಾ ಬಳಕೆ ಮತ್ತು ಅದರ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್ಗಳ ಬಳಕೆಯ ಮೇಲೆ ನಿರ್ಬಂಧ ವಿಧಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ನಾಗರಿಕ ವಿಮಾನಯಾನ ಸಚಿವಾಲಯ ಹೊರಡಿಸಿದ 2021 ರ ಮಾರ್ಗಸೂಚಿ ಪ್ರಕಾರ, 250 ಗ್ರಾಂ ಗಿಂತ ಕಡಿಮೆ ತೂಕದ ಡ್ರೋನ್ಗಳನ್ನು ಹಾರಲು ಯಾವುದೇ ಪರವಾನಗಿ ಅಥವಾ ಪರವಾನಗಿ ಅಗತ್ಯವಿಲ್ಲ. ಆದರೆ, ವಿಮಾನ ನಿಲ್ದಾಣ, ಬಂದರು ಸೇರಿದಂತೆ ಕೆಲವು ನಿರ್ಬಂಧಿತ ಪ್ರದೇಶಗಳಲ್ಲಿ ಡ್ರೋಣ್ ಹಾರಾಟಕ್ಕೆ ಅನುಮತಿ ಇಲ್ಲ.
ಜಮ್ಮುವಿನ ಐಎಎಫ್ ವಾಯುನೆಲೆಯ ಮೇಲೆ ಭಾನುವಾರ ನಸುಕಿನಲ್ಲಿ ಭಯೋತ್ಪಾದಕರು ಡ್ರೋಣ್ ದಾಳಿ ನಡೆಸಿದ್ದರು. ಆರು ನಿಮಿಷಗಳ ಅಂತರದಲ್ಲಿ ಎರಡು ಬಾಂಬ್ ಬ್ಲಾಸ್ಟ್ ಆಗಿದ್ದು, ಇಬ್ಬರು ಯೋಧರು ಗಾಯಕ್ಕೆ ಒಳಗಾಗಿದ್ದರು. ಈ ದಾಳಿ, 2016ರ ಪಠಾಣ್ ಕೋಟ್ ವಾಯನೆಲೆ ದಾಳಿಯ ಮುಂದುವರಿಕೆ ಎನ್ನಲಾಗುತ್ತಿದ್ದು, ಇದರ ಹಿಂದೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡ ಇರುವ ಶಂಕೆ ಇದೆ ಎಂದು ಗುಪ್ತಚರ ಇಲಾಖೆ ಉನ್ನತ ಮೂಲಗಳು ತಿಳಿಸಿದ್ದವು. ಇದರ ಬೆನ್ನಿಗೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಲಾಗಿತ್ತು.
ಇದರ ಬೆನ್ನಲ್ಲೇ ಒಂದು ದಿನದ ನಂತರ, ಜಮ್ಮು ಸೇನಾ ನೆಲೆಯ ಬಳಿ ಮತ್ತೆರಡು ಡ್ರೋಣ್ ಬಂದಿದ್ದು ಅವನ್ನು ಸೈನಿಕರು ಹೊಡೆದುರುಳಿಸಿದ್ದರು. ಈ ಹಿನ್ನೆಲೆಯಲ್ಲಿ ಡ್ರೋಣ್ ಬಳಕೆ ಮತ್ತು ಅದರ ಮೇಲೆ ದೇಶಾದ್ಯಂತ ಕಣ್ಣಿಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
Prime Minister Narendra Modi Tuesday chaired a high-level meeting with Defence Minister Rajnath Singh, Union Home Minister Amit Shah, and NSA Ajit Doval on “futuristic challenges” in the defense sector. A discussion on equipping Indian armed forces with modern pieces of equipment was also held during the meeting.
16-07-25 07:05 pm
Bangalore Correspondent
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 04:37 pm
HK News Desk
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm