ಬ್ರೇಕಿಂಗ್ ನ್ಯೂಸ್
02-07-21 05:46 pm Headline Karnataka News Network ದೇಶ - ವಿದೇಶ
ಪುಣೆ, ಜುಲೈ 2: ರಾಷ್ಟ್ರೀಯ ವೈದ್ಯರ ದಿನವೇ ಪುಣೆಯಲ್ಲಿ ಕುಟುಂಬ ಕಲಹದಿಂದ ಬೇಸತ್ತ ಯುವ ವೈದ್ಯ ದಂಪತಿ ಸಾವಿಗೆ ಶರಣಾಗಿದ್ದು ಆಘಾತ ಮೂಡಿಸಿದ್ದಾರೆ. ಜೀವನದ ಬಗ್ಗೆ ಜನಸಾಮಾನ್ಯರಿಗೆ ಪಾಠ ಹೇಳುವ ವೈದ್ಯರೇ ಈ ರೀತಿ ಸಾವಿಗೆ ಶರಣಾಗಿದ್ದು ಸುದ್ದಿಗೆ ಗ್ರಾಸವಾಗಿದೆ. ಅವರಿಬ್ಬರೂ ಬಿಎಎಂಎಸ್ ಪೂರೈಸಿದ ಆಯುರ್ವೇದಿಕ್ ವೈದ್ಯರು. 2019ರಲ್ಲಿ ಮದುವೆಯಾಗಿದ್ದ ದಂಪತಿ ಜೊತೆಯಾಗೇ ಕ್ಲಿನಿಕ್ ನಡೆಸುತ್ತಿದ್ದರು. ಆದರೆ, ಎರಡೇ ವರ್ಷದಲ್ಲಿ ಜೊತೆಯಾಗೇ ಸಾವಿನ ಹಾದಿಯನ್ನೂ ಹಿಡಿದಿದ್ದಾರೆ.
ನಿಖಿಲ್ ಶೇಂಡ್ಕರ್ (28) ಮತ್ತು ಅಂಕಿತಾ(25) ತಮ್ಮ ಮನೆಯಲ್ಲೇ ಮೃತಪಟ್ಟ ವೈದ್ಯ ದಂಪತಿ. 2019ರಲ್ಲಿ ಪ್ರೀತಿಸಿ ಮದುವೆಯಾಗಿದ್ದ ಈ ದಂಪತಿ ವನ್ವಾಡಿಯಲ್ಲಿ ಜೊತೆಯಾಗೇ ಕ್ಲಿನಿಕ್ ತೆರೆದಿದ್ದರು. ಎರಡು ವರ್ಷಗಳಿಂದ ಯಾವುದೇ ಕಲಹವೂ ಇಲ್ಲದೆ ಕ್ಲಿನಿಕ್ ಮುಂದುವರಿದಿತ್ತು. ಇತ್ತೀಚೆಗೆ ಮೂರು ತಿಂಗಳ ಹಿಂದೆ ದಂಪತಿ ನಡುವೆ ಕಲಹ ಏರ್ಪಟ್ಟು ನಿಖಿಲ್ ಶೇಂಡ್ಕರ್ ಬೇರೆಯದ್ದೇ ಕ್ಲಿನಿಕ್ ಆರಂಭಿಸಿದ್ದ.

ದಂಪತಿ ಒಂದೇ ಮನೆಯಲ್ಲಿ ವಾಸ ಇದ್ದರೂ, ನಿಖಿಲ್ ಕಸೂರ್ದಿ ಯವತ್ ಎನ್ನುವ ಪ್ರದೇಶದಲ್ಲಿ ಪ್ರತ್ಯೇಕವಾಗಿ ಕ್ಲಿನಿಕ್ ನಡೆಸುತ್ತಿದ್ದ. ವನ್ವಾಡಿಯಲ್ಲಿದ್ದ ಹಳೆಯ ಕ್ಲಿನಿಕ್ ನಲ್ಲಿ ಪತ್ನಿ ಅಂಕಿತಾ ಮಾತ್ರ ಇದ್ದಳು. ಮೊನ್ನೆ ಬುಧವಾರ ಮಧ್ಯಾಹ್ನ ಹಳೆಯ ಪೇಶಂಟ್ ಪಾರ್ಟಿಯೊಬ್ಬರು ನಿಖಿಲ್ ಗೆ ಫೋನ್ ಮಾಡಿದ್ದರು. ತಲೆನೋವು ಇದ್ದುದರಿಂದ ಅರ್ಜೆಂಟ್ ಅಪಾಯಿಂಟ್ ಮೆಂಟ್ ಕೇಳಿದ್ದರು. ಆದರೆ, ನಾನು ಈಗ ವನ್ವಾಡಿಯಲ್ಲಿ ಇಲ್ಲ. ಅಲ್ಲಿ ನನ್ನ ಪತ್ನಿ ಇದ್ದಾಳೆ. ಅಲ್ಲಿ ಹೋಗಿ ಎಂದು ಫೋನ್ ಇಟ್ಟಿದ್ದ. ಆಬಳಿಕ ಪತ್ನಿಗೆ ಫೋನ್ ಮಾಡಿ, ಹಳೆಯ ಪೇಶಂಟ್ ಒಬ್ಬರು ಬರುತ್ತಿದ್ದಾರೆ ಎಂದಿದ್ದ. ಆದರೆ, ಅಂಕಿತಾ ಪೇಶಂಟ್ ನೋಡಲು ನಿರಾಕರಿಸಿದ್ದಳು. ಅಲ್ಲದೆ, ಇದೇ ವಿಚಾರದಲ್ಲಿ ಇಬ್ಬರ ನಡುವೆಯೂ ಫೋನಲ್ಲಿ ಭಾರೀ ವಾಗ್ಯುದ್ಧ ನಡೆದು ಹೋಗಿತ್ತು. ಸಂಜೆ ನಾಲ್ಕು ಗಂಟೆ ಸುಮಾರಿಗೆ ಇಬ್ಬರ ಮಧ್ಯೆ ಫೋನ್ ಜಗಳ ನಡೆದಿತ್ತು.

ಆನಂತರ 5.15 ಗಂಟೆ ಸುಮಾರಿಗೆ ನಿಖಿಲ್ ನೇರವಾಗಿ ತನ್ನ ಅಪಾರ್ಟ್ಮೆಂಟಿಗೆ ಬಂದಿದ್ದಾನೆ. ಆದರೆ, ಮನೆಯ ಹೊರಭಾಗದಲ್ಲಿ ಬಾಗಿಲಿಗೆ ಒಳಗಿಂದ ಲಾಕ್ ಹಾಕಲಾಗಿತ್ತು. ಫೋನ್ ಮಾಡಿದರೆ ನೋ ರೆಸ್ಪಾನ್ಸ್ ಇತ್ತು. ಕರೆದರೂ ಬಾಗಿಲು ತೆರೆಯದೇ ಇದ್ದುದರಿಂದ ಗಾಬರಿಗೊಂಡು ಪೊಲೀಸರಿಗೂ ವಿಷಯ ತಿಳಿಸಿದ. ಆನಂತರ ಬಾಗಿಲು ಒಡೆದು ಮನೆಯ ಒಳಹೊಕ್ಕಾಗ ಪತ್ನಿ ಡ್ಯುಪ್ಲೆಕ್ಸ್ ಮನೆಯ ಮೂರನೇ ಮಹಡಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಕೂಡಲೇ ಆಕೆಯನ್ನು ಇಳಿಸಿದ ನಿಖಿಲ್, ಪಕ್ಕದ ಆಸ್ಪತ್ರೆಗೆ ಪೊಲೀಸರ ಜೊತೆ ಸೇರಿ ಕೊಂಡೊಯ್ದಿದ್ದಾನೆ. ಅಲ್ಲಿನ ತಪಾಸಣೆ ನಡೆಸಿದ ವೈದ್ಯರು, ಅಂಕಿತಾ ಸಾವು ಆಗಿರುವ ಬಗ್ಗೆ ತಿಳಿಸಿದ್ದಾರೆ.
ಪೊಲೀಸರು ಅಸಹಜ ಸಾವಿನ ಬಗ್ಗೆ ಕೇಸ್ ರಿಜಿಸ್ಟರ್ ಮಾಡಿಕೊಂಡು ಅಲ್ಲಿಂದ ತೆರಳಿದ್ದರೆ, ಇತ್ತ ನಿಖಿಲ್ ನೇರವಾಗಿ ತನ್ನ ಮನೆಗೆ ಬಂದು ಸಂಜೆ 7.30ರ ಸುಮಾರಿಗೆ ನೇಣು ಬಿಗಿದುಕೊಂಡಿದ್ದಾನೆ. ಪತ್ನಿ ಸಾವಿಗೆ ಶರಣಾದ ಆಘಾತವೋ, ತನ್ನ ಬಗೆಗೇ ಆದ ಪರಿತಾಪವೋ ನಿಖಿಲ್ ಶೇಂಡ್ಕರ್ ಕೂಡ ತನ್ನದೇ ಮನೆಯ ಬಾತ್ ರೂಮಿನಲ್ಲಿ ಸಾವು ಕಂಡಿದ್ದ. ಅಲ್ಲದೆ, ಡೆತ್ ನೋಟ್ ಬರೆದಿಟ್ಟಿದ್ದು ನನ್ನ ಸಾವಿಗೆ ಯಾರೂ ಕಾರಣರಿಲ್ಲ. ಯಾರನ್ನೂ ದೂಷಿಸುವುದಿಲ್ಲ ಎಂದು ಹೇಳಿ ಸಾವಿಗೆ ಕೊರಳೊಡ್ಡಿದ್ದ. ಇಬ್ಬರು ಯುವ ವೈದ್ಯರ ಸಾವಿಗೆ ಏನು ಕಾರಣ ಅನ್ನೋದರ ಬಗ್ಗೆ ವನ್ವಾಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾವು, ನೋವು, ಜೀವನದ ಬಗ್ಗೆ ಬೇರೆಯವರಿಗೆ ಪಾಠ ಹೇಳುವ ವೈದ್ಯರೇ ಈ ರೀತಿ ಇಗೋ ಇಟ್ಟುಕೊಂಡು ಜೀವನದ ಬಂಡಿಗೇ ಇತಿಶ್ರೀ ಹಾಕಿದ್ದು ಪುಣೆಯಲ್ಲಿ ದೊಡ್ಡ ಸುದ್ದಿಯಾಗಿದೆ.
A couple, both doctors with BAMS degrees, died by suicide within hours of each other, said police on Thursday. Nikhil Shendkar (28) and his wife Ankita (25) were both found dead at their residence in Azad Nagar in Wanavdi.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm