ಬ್ರೇಕಿಂಗ್ ನ್ಯೂಸ್
04-07-21 02:10 pm Headline Karnataka News Network ದೇಶ - ವಿದೇಶ
Photo credits : Shutter Stock, The Nation
ಮನಿಲಾ, ಜುಲೈ 4: ಯೋಧರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ಯುದ್ಧ ವಿಮಾನವೊಂದು ಪತನಗೊಂಡಿದ್ದು 17 ಮಂದಿ ಸಾವನ್ನಪ್ಪಿದ್ದಾರೆ. 92 ಮಂದಿ ಇದ್ದ ವಿಮಾನವು ಭಾನುವಾರ ಬೆಳಗ್ಗೆ ಮನಿಲಾದಿಂದ 1,000 ಕಿ.ಮೀ ದೂರದಲ್ಲಿರುವ ಸುಲು ಪ್ರಾಂತ್ಯದಲ್ಲಿ ನೆಲಕ್ಕುರುಳಿದೆ.
ಯುದ್ಧ ವಿಮಾನ ಸಿ 130 ಪತನವನ್ನು ಸಶಸ್ತ್ರ ಪಡೆ ಮುಖ್ಯಸ್ಥ ಸಿರಿಲಿಟೊ ಸೊಬೆಜಾನಾ ಅವರು ಖಚಿತಪಡಿಸಿದ್ದಾರೆ. ಸಿ 130 ಯುದ್ಧ ವಿಮಾನದ ಅವಶೇಷಗಳಿಂದ 40 ಮಂದಿಯನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ವಿಮಾನ ಇಳಿಯುವಾಗ ರನ್ ವೇ ತಪ್ಪಿ ಹೋಗಿದ್ದು ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. “ಮಿಂದನಾವೋ ದ್ವೀಪದಿಂದ ಸೈನಿಕ ತುಕಡಿಗಳನ್ನ ಹೊತ್ತು ಹೋದ ಈ ವಿಮಾನ ರನ್ ವೇ ಅನ್ನು ತಪ್ಪಿದೆ. ಈ ಘಟನೆ ಬಹಳ ವಿಷಾದಕರ. ರಕ್ಷಣಾ ಕಾರ್ಯಕರ್ತರು ಸ್ಥಳದಲ್ಲಿದ್ದು ಕಾರ್ಯಾಚರಣೆ ನ ಡೆಸಿದ್ದಾರೆ. ಸದ್ಯ 40 ಮಂದಿಯನ್ನ ರಕ್ಷಿಇಸಿ ಸಮೀಪದ 11ನೇ ಇನ್ಫ್ಯಾಂಟ್ರಿ ಡಿವಿಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಇನ್ನೂ ಹೆಚ್ಚು ಜನರನ್ನ ರಕ್ಷಿಸಲು ಸಾಧ್ಯವಾಗುವಂತೆ ಪ್ರಾರ್ಥಿಸುತ್ತಿದ್ದೇವೆ” ಎಂದು ಸೇನಾಧಿಕಾರಿ ಜನರಲ್ ಸಿರಿಲಿಟೊ ಸೇಬೆಜನ ಹೇಳಿದರೆಂದು ಎಎಫ್ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ವಿಮಾನದಲ್ಲಿದ್ದವರಲ್ಲಿ ಅನೇಕರು ಇತ್ತೀಚೆಗಷ್ಟೇ ಮಿಲಿಟರಿ ತರಬೇತಿ ಪಡೆದು ಬಂದವರಾಗಿದ್ದರು. ಭಯೋತ್ಪಾದಕ ಚಟುವಟಿಕೆ ಹೆಚ್ಚು ಇರುವ ದಕ್ಷಿಣ ಭಾಗದಲ್ಲಿ ಉಗ್ರರ ವಿರುದ್ಧ ಹೋರಾಡುತ್ತಿರುವ ಜಂಟಿ ಕಾರ್ಯ ಪಡೆಗೆ ಇವರನ್ನ ನಿಯೋಜಿಸಲಾಗಿತ್ತೆನ್ನಲಾಗಿದೆ.


ಫಿಲಿಪ್ಪೈನ್ಸ್ನ ದಕ್ಷಿಣ ಭಾಗದಲ್ಲಿ ಬಹಳಷ್ಟು ಉಗ್ರ ಸಂಘಟನೆಗಳು ಸಕ್ರಿಯವಾಗಿವೆ. ಇವುಗಳಲ್ಲಿ ಕುಖ್ಯಾತವಾದ ಅಬು ಸಯ್ಯಾಫ್ ಎಂಬ ಸಂಘಟನೆಯೂ ಒಂದು. ಭಯೋತ್ಪಾದನೆ ಹೆಚ್ಚಿರುವ ಕಾರಣ ಇಲ್ಲಿ ಫಿಲಿಪ್ಪೈನ್ಸ್ ಸೇನಾ ಉಪಸ್ಥಿತಿ ಹೆಚ್ಚಿದೆ.
ಇನ್ನು, ಕಳೆದ ತಿಂಗಳಷ್ಟೇ ಫಿಲಿಪ್ಪೈನ್ಸ್ ಹೆಲಿಕಾಪ್ಟರ್ ಅಪಘಾತ ಘಟನೆಯನ್ನ ಕಂಡಿತ್ತು. ರಾತ್ರಿ ಹೊತ್ತು ತರಬೇತಿ ನೀಡುತ್ತಿದ್ದ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ಪತನಗೊಂಡು ಅದರಲ್ಲಿದ್ದ ಎಲ್ಲಾ ಆರು ಮಂದಿ ಅಸುನೀಗಿದ್ದರು. ಇದು ಮನೀಲಾದ ಉತ್ತರ ಭಾಗದಲ್ಲಿರುವ ಕಣಿವೆಯೊಂದರಲ್ಲಿ ಸಂಭವಿಸಿದ ದುರಂತ. ಮೂವರು ಪೈಲಟ್ಗಳು ಹಾಗೂ ಮೂವರು ಸೈನಿಕರು ಆ ಹೆಲಿಕಾಪ್ಟರ್ನಲ್ಲಿದ್ದರು.
At least 17 people were killed and 40 injured when a Philippine military aircraft carrying troops crashed after missing the runway in the country's south, officials said.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm