ಬ್ರೇಕಿಂಗ್ ನ್ಯೂಸ್
06-07-21 01:01 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 6 : ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಊಹಾಪೋಹಗಳು ಎದ್ದಿರುವ ನಡುವೆಯೇ ಮಂಗಳವಾರ ಸಂಜೆ 5 ಗಂಟೆಗೆ ಹಿರಿಯ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಆಯೋಜಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಭೆಯನ್ನು ದಿಢೀರ್ ರದ್ದು ಮಾಡಲಾಗಿದೆ.
ಸಚಿವರ ಕಾರ್ಯದಕ್ಷತೆ ಮತ್ತು ಭವಿಷ್ಯದ ಯೋಜನೆಗಳ ಕುರಿತು ಚರ್ಚಿಸಲು ಸಭೆ ಆಯೋಜಿಸಲಾಗಿತ್ತು ಎನ್ನಲಾಗಿದೆ. ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್, ಪಹ್ಲಾದ ಜೋಷಿ, ಪಿಯೂಷ್ ಗೋಯಲ್ ಮತ್ತು ನರೇಂದ್ರ ಸಿಂಗ್ ತೋಮರ್ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿತ್ತು.


ಇದಕ್ಕೂ ಮುನ್ನ ಸೋಮವಾರ, ಪ್ರಧಾನಿ ಮೋದಿ ಅವರು ಅಮಿತ್ ಶಾ ಹಾಗೂ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದ್ದರು. ಇದು ಸಂಪುಟ ವಿಸ್ತರಣೆ ಕುರಿತಾದ ಸುದೀರ್ಘ ಚಟುವಟಿಕೆಗಳಿಗೆ ಅಂತಿಮ ಸ್ಪರ್ಶ ನೀಡುವ ಉದ್ದೇಶದ ಸಭೆ ಎನ್ನಲಾಗಿದೆ.
ಜೂನ್ 20ರಿಂದಲೂ ಪ್ರಧಾನಿ ಮೋದಿ, ವಿವಿಧ ಸಚಿವಾಲಯಗಳ ಕಾರ್ಯವೈಖರಿ, ಪ್ರದರ್ಶನಗಳ ಪರಾಮರ್ಶನಾ ಸಭೆಗಳನ್ನು ನಡೆಸಿದ್ದರು. ಸಂಪುಟ ವಿಸ್ತರಣೆಗೆ ತಯಾರಿ ಪೂರ್ಣಗೊಂಡಿದ್ದು ಯಾವ ರಾಜ್ಯದಿಂದ ಯಾರನ್ನು ಸಚಿವರನ್ನಾಗಿ ಮಾಡಬೇಕು ಮತ್ತು ಯಾರನ್ನು ಕೈಬಿಡಬೇಕು ಎನ್ನುವ ಬಗ್ಗೆ ನಿರ್ಣಯ ಆಗಿದೆ. 2019ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿ ಸಂಪುಟ ವಿಸ್ತರಣೆ ಚಟುವಟಿಕೆ ನಡೆಯುತ್ತಿದೆ. ಒಟ್ಟು 28 ಸಚಿವ ಸ್ಥಾನಗಳು ಖಾಲಿ ಇದ್ದು, ಇದರಲ್ಲಿ ಕನಿಷ್ಠ 18 ಸ್ಥಾನ ಭರ್ತಿಯಾಗುವ ನಿರೀಕ್ಷೆಯಿದೆ. ಜುಲೈ 7 ಅಥವಾ 8ರಂದು ಸಂಪುಟ ವಿಸ್ತರಣೆ ಖಚಿತ ಎಂದು ಹೇಳಲಾಗುತ್ತಿದೆ.
PM Modi’s meeting with Amit Shah, JP Nadda, top ministers Rajnath Singh and others on Tuesday evening on the likely plans of Cabinet expansion has been canceled.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am