ಬ್ರೇಕಿಂಗ್ ನ್ಯೂಸ್
07-07-21 03:39 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 7: ಪ್ರಧಾನಿ ಮೋದಿ ಕೊನೆಗೂ ಸಂಪುಟಕ್ಕೆ ಸರ್ಜರಿ ಮಾಡಿದ್ದಾರೆ. ಹಿರಿಯ ಸಚಿವರಾದ ಡಿ.ವಿ.ಸದಾನಂದ ಗೌಡ, ಆರೋಗ್ಯ ಸಚಿವ ಡಾ.ಹರ್ಷವರ್ಧನ್, ರಮೇಶ್ ಪೋಖ್ರಿಯಾಲ್, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಸೇರಿ ಹತ್ತು ಮಂದಿಯನ್ನು ಸಂಪುಟದಿಂದ ಕೈಬಿಡಲಾಗಿದೆ. ಇದೇ ವೇಳೆ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಸೇರಿ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ ನೀಡಲಾಗಿದೆ.
ಈ ವರ್ಷ ಎದುರಾಗಲಿರುವ ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟಕ್ಕೆ ಸರ್ಜರಿ ಮಾಡಲಾಗುತ್ತಿದ್ದು ಹಳಬರನ್ನು ತೆಗೆದು ಹೊಸಬರಿಗೆ ಮಣೆ ನೀಡಲಾಗಿದೆ. ಇದರಲ್ಲಿ ಕರ್ನಾಟಕದಲ್ಲಿ ನಾಲ್ವರಿಗೆ ಸಚಿವ ಸ್ಥಾನ ಸಿಕ್ಕಿರುವುದು ವಿಶೇಷ.





ಕರ್ನಾಟಕದಲ್ಲಿ 25 ಬಿಜೆಪಿ ಸಂಸದರಿದ್ದರೂ ಮೋದಿ ಸಂಪುಟದಲ್ಲಿ ಇಬ್ಬರಿಗೆ ಮಾತ್ರ ಸ್ಥಾನ ನೀಡಲಾಗಿತ್ತು. ಈ ಕೊರತೆ ನೀಗಿಸಲು ಈ ಬಾರಿ ಪ್ರಯತ್ನ ಮಾಡಲಾಗಿದ್ದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ, ಬೀದರಿನ ಭಗವಂತ ಖೂಬಾ ಹಾಗೂ ರಾಜ್ಯಸಭಾ ಸದಸ್ಯ ರಾಜೀವ ಚಂದ್ರಶೇಖರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿದ್ದಾರೆ ಎನ್ನುವ ಮಾಹಿತಿಯಿದೆ.
ಇನ್ನುಳಿದಂತೆ, ಬಹುತೇಕ ಯುವ ಸಂಸದರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಲಿಂಗಾಯತ ಕೋಟಾದಿಂದ ಸಚಿವರಾಗಿದ್ದ ಸುರೇಶ ಅಂಗಡಿ ನಿಧನವಾಗಿದ್ದರಿಂದ ಅವರ ಸ್ಥಾನ ತುಂಬಲು ಲಿಂಗಾಯತರೇ ಆಗಿರುವ ಭಗವಂತ ಖೂಬಾರನ್ನು ಆಯ್ಕೆ ಮಾಡಲಾಗಿದೆ.
ಗೌಡ ಜನಾಂಗದಿಂದ ಸದಾನಂದ ಗೌಡರ ಬದಲಿಗೆ ಅದೇ ಸಮುದಾಯದ ಶೋಭಾ ಕರಂದ್ಲಾಜೆಗೆ ಸ್ಥಾನ ನೀಡಲಾಗಿದೆ. ಹಿಂದುಳಿದ ವರ್ಗದಿಂದ ನಾರಾಯಣ ಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಸಚಿವ ಸ್ಥಾನದಲ್ಲಿ ನಿರೀಕ್ಷಿತ ಸಾಧನೆ ಮಾಡದವರನ್ನು ಕೈಬಿಡಲಾಗಿದೆ ಎನ್ನುವ ಮಾಹಿತಿ ಇದೆ. ದೇಶದಲ್ಲಿ ಒಟ್ಟು 43 ಸಂಸದರಿಗೆ ಸಚಿವ ಸ್ಥಾನ ನೀಡಲಾಗಿದೆ. 28 ಸ್ಥಾನಗಳು ಖಾಲಿಯಿದ್ದವು. ಅದನ್ನು ಭರ್ತಿ ಮಾಡಲು ಮೋದಿ ಕಸರತ್ತು ನಡೆಸಿದ್ದಾರೆ. ಇಂದು ಸಂಜೆ ಆರು ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Union Chemicals and Fertilizers Minister DV Sadananda Gowda on Wednesday resigned from the Union Council of Ministers. Gowda confirmed his decision to step down. Besides being the chemicals and fertilizers minister in the Narendra Modi government, Gowda has also held portfolios like Railways, Law, Statistics, and Programme Implementation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm