ಬ್ರೇಕಿಂಗ್ ನ್ಯೂಸ್
07-07-21 03:39 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 7: ಪ್ರಧಾನಿ ಮೋದಿ ಕೊನೆಗೂ ಸಂಪುಟಕ್ಕೆ ಸರ್ಜರಿ ಮಾಡಿದ್ದಾರೆ. ಹಿರಿಯ ಸಚಿವರಾದ ಡಿ.ವಿ.ಸದಾನಂದ ಗೌಡ, ಆರೋಗ್ಯ ಸಚಿವ ಡಾ.ಹರ್ಷವರ್ಧನ್, ರಮೇಶ್ ಪೋಖ್ರಿಯಾಲ್, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಸೇರಿ ಹತ್ತು ಮಂದಿಯನ್ನು ಸಂಪುಟದಿಂದ ಕೈಬಿಡಲಾಗಿದೆ. ಇದೇ ವೇಳೆ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಸೇರಿ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ ನೀಡಲಾಗಿದೆ.
ಈ ವರ್ಷ ಎದುರಾಗಲಿರುವ ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟಕ್ಕೆ ಸರ್ಜರಿ ಮಾಡಲಾಗುತ್ತಿದ್ದು ಹಳಬರನ್ನು ತೆಗೆದು ಹೊಸಬರಿಗೆ ಮಣೆ ನೀಡಲಾಗಿದೆ. ಇದರಲ್ಲಿ ಕರ್ನಾಟಕದಲ್ಲಿ ನಾಲ್ವರಿಗೆ ಸಚಿವ ಸ್ಥಾನ ಸಿಕ್ಕಿರುವುದು ವಿಶೇಷ.
ಕರ್ನಾಟಕದಲ್ಲಿ 25 ಬಿಜೆಪಿ ಸಂಸದರಿದ್ದರೂ ಮೋದಿ ಸಂಪುಟದಲ್ಲಿ ಇಬ್ಬರಿಗೆ ಮಾತ್ರ ಸ್ಥಾನ ನೀಡಲಾಗಿತ್ತು. ಈ ಕೊರತೆ ನೀಗಿಸಲು ಈ ಬಾರಿ ಪ್ರಯತ್ನ ಮಾಡಲಾಗಿದ್ದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ, ಬೀದರಿನ ಭಗವಂತ ಖೂಬಾ ಹಾಗೂ ರಾಜ್ಯಸಭಾ ಸದಸ್ಯ ರಾಜೀವ ಚಂದ್ರಶೇಖರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿದ್ದಾರೆ ಎನ್ನುವ ಮಾಹಿತಿಯಿದೆ.
ಇನ್ನುಳಿದಂತೆ, ಬಹುತೇಕ ಯುವ ಸಂಸದರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಲಿಂಗಾಯತ ಕೋಟಾದಿಂದ ಸಚಿವರಾಗಿದ್ದ ಸುರೇಶ ಅಂಗಡಿ ನಿಧನವಾಗಿದ್ದರಿಂದ ಅವರ ಸ್ಥಾನ ತುಂಬಲು ಲಿಂಗಾಯತರೇ ಆಗಿರುವ ಭಗವಂತ ಖೂಬಾರನ್ನು ಆಯ್ಕೆ ಮಾಡಲಾಗಿದೆ.
ಗೌಡ ಜನಾಂಗದಿಂದ ಸದಾನಂದ ಗೌಡರ ಬದಲಿಗೆ ಅದೇ ಸಮುದಾಯದ ಶೋಭಾ ಕರಂದ್ಲಾಜೆಗೆ ಸ್ಥಾನ ನೀಡಲಾಗಿದೆ. ಹಿಂದುಳಿದ ವರ್ಗದಿಂದ ನಾರಾಯಣ ಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಸಚಿವ ಸ್ಥಾನದಲ್ಲಿ ನಿರೀಕ್ಷಿತ ಸಾಧನೆ ಮಾಡದವರನ್ನು ಕೈಬಿಡಲಾಗಿದೆ ಎನ್ನುವ ಮಾಹಿತಿ ಇದೆ. ದೇಶದಲ್ಲಿ ಒಟ್ಟು 43 ಸಂಸದರಿಗೆ ಸಚಿವ ಸ್ಥಾನ ನೀಡಲಾಗಿದೆ. 28 ಸ್ಥಾನಗಳು ಖಾಲಿಯಿದ್ದವು. ಅದನ್ನು ಭರ್ತಿ ಮಾಡಲು ಮೋದಿ ಕಸರತ್ತು ನಡೆಸಿದ್ದಾರೆ. ಇಂದು ಸಂಜೆ ಆರು ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Union Chemicals and Fertilizers Minister DV Sadananda Gowda on Wednesday resigned from the Union Council of Ministers. Gowda confirmed his decision to step down. Besides being the chemicals and fertilizers minister in the Narendra Modi government, Gowda has also held portfolios like Railways, Law, Statistics, and Programme Implementation.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm