ಬ್ರೇಕಿಂಗ್ ನ್ಯೂಸ್
09-07-21 10:56 am Headline Karnataka News Network ದೇಶ - ವಿದೇಶ
ಶ್ರೀನಗರ, ಜು.09: ''ನಿಯಂತ್ರಣ ರೇಖೆಯ ಉದ್ದಕ್ಕೂ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ,'' ಎಂದು ಜಮ್ಮು ಮತ್ತು ಕಾಶ್ಮೀರದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ''ಇಬ್ಬರು ಭಾರತೀಯ ಸೈನಿಕರು ಕೂಡಾ ಸಾವನ್ನಪ್ಪಿದ್ದಾರೆ,'' ಎಂದು ವಕ್ತಾರರು ತಿಳಿಸಿದ್ದಾರೆ.
ಇದು ಹಲವು ದಿನಗಳಲ್ಲಿ ನಿಯಂತ್ರಣ ರೇಖೆ ಅಥವಾ ನಿಯಂತ್ರಣ ರೇಖೆಯ ಉದ್ದಕ್ಕೂ ನಡೆದ ಎರಡನೇ ಮುಖಾಮುಖಿಯಾಗಿದೆ. ನಿಯಂತ್ರಣ ರೇಖೆಯ ಉದ್ದಕ್ಕೂ ಕದನ ವಿರಾಮವನ್ನು ಆಗಾಗೇ ಉಲ್ಲಂಘನೆ ಮಾಡಲಾಗುತ್ತಿದೆ.
ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ ಜಮ್ಮು ಪ್ರದೇಶದ ಭಾರತೀಯ ವಾಯುಪಡೆಯ ನೆಲೆಯ ಮೇಲೆ ಡ್ರೋನ್ ದಾಳಿ ನಡೆಸಿದ ಒಂದು ತಿಂಗಳೊಳಗೆ ಭಾರತೀಯ ಸೈನಿಕರು ಎನ್ಕೌಂಟರ್ಗಳು ಮತ್ತು ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.




ಈ ಬಗ್ಗೆ ಮಾಹಿತಿ ನೀಡಿರುವ ರಕ್ಷಣಾ ವಕ್ತಾರರು, "ರಾಜೌರಿ ಜಿಲ್ಲೆಯ ದಾದಲ್, ಸುಂದರಬಾನಿ ಸೆಕ್ಟರ್ನಲ್ಲಿ ಒಳನುಸುಳುವಿಕೆ ಮತ್ತು ಭಯೋತ್ಪಾದಕರ ಕೃತ್ಯಗಳ ಬಗ್ಗೆ ಮಾಹಿತಿ ಲಭಿಸಿದ ಆಧಾರದ ಮೇಲೆ, ಸೈನ್ಯವು ಜೂನ್ 29 ರಂದು ವ್ಯಾಪಕ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಕಾರ್ಯಾಚರಣೆ ವಿಸ್ತರಿಸಿ ಜುಲೈ 8 ರಂದು ದಾದಲ್ ಕಾಡಿನಲ್ಲಿ ಉಗ್ರರನ್ನು ಮುಖಾಮುಖಿ ಮಾಡಲಾಯಿತು," ಎಂದು ಹೇಳಿದರು.
ಆದರೆ ಉಗ್ರರು ಗುಂಡು ಹಾರಿಸಿದ್ದು, ಗ್ರೆನೇಡ್ಗಳನ್ನು ಎಸೆಯಲು ಆರಂಭಿಸಿದರು. ಎನ್ಕೌಂಟರ್ ಆಗಿ ಇಬ್ಬರು ವಿದೇಶಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಹಾಗೆಯೇ ಕಾರ್ಯಾಚರಣೆಯಲ್ಲಿ ಇಬ್ಬರು ಭಾರತೀಯ ಯೋಧರು ಕೂಡಾ ಮೃತಪಟ್ಟಿದ್ದಾರೆ. ಇನ್ನಿಬ್ಬರು ಯೋಧರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ," ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಇದಕ್ಕೂ ಮುನ್ನ ಜುಲೈ 7 ರಂದು ನಡೆದ ಎನ್ಕೌಂಟರ್ನಲ್ಲಿ, ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ, ಮೆಹ್ರಾಜುದ್ದೀನ್ ಹಲ್ವಾಯ್ನನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿದೆ.
Two Pakistani terrorists were shot dead in an encounter along the Line of Control, a defense spokesperson in Jammu and Kashmir said. Two Indian soldiers were killed in action, the spokesperson said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm