ಬ್ರೇಕಿಂಗ್ ನ್ಯೂಸ್
10-07-21 02:52 pm Headline Karnataka News Network ದೇಶ - ವಿದೇಶ
ಮಧ್ಯಪ್ರದೇಶ, ಜುಲೈ 10: ಮದುವೆಯಾಗುತ್ತಿಲ್ಲ ಎಂಬ ಖಿನ್ನತೆಯಲ್ಲಿದ್ದ ಮಹಿಳಾ ಸಬ್ಇನ್ಸ್ಪೆಕ್ಟರ್ವೋರ್ವಳು ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ರತಲಾಮ್ನಲ್ಲಿ ನಡೆದಿದೆ.
ಸಾವನ್ನಪ್ಪಿರುವ ಸಬ್ ಇನ್ಸ್ಪೆಕ್ಟರ್ 35 ವರ್ಷದ ಕವಿತಾ ಸೋಲಂಕಿ ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ರಜೆಯಿಂದ ಮನೆಗೆ ಬಂದಿದ್ದ ಪೊಲೀಸ್ ಅಧಿಕಾರಿ ಖಿನ್ನತೆಗೊಳಗಾಗಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರ ಪ್ರಕಾರ ಮದುವೆಯಾಗದ ಕಾರಣದಿಂದಾಗಿ ಖಿನ್ನತೆಗೊಳಗಾಗಿದ್ದಳು ಎಂದು ತಿಳಿದು ಬಂದಿದೆ. ಜತೆಗೆ ಸಂಬಂಧಿಕರು ಮೇಲಿಂದ ಮೇಲೆ ಮದುವೆ ವಿಚಾರವಾಗಿ ಪ್ರಶ್ನೆ ಮಾಡುತ್ತಿದ್ದರು ಎನ್ನಲಾಗಿದೆ.

ಕವಿತಾ ಸೋಲಂಕಿ, ಮಧ್ಯಪ್ರದೇಶದ ರಾತಲಾಮ್ ಸ್ಟೇಷನ್ ರೋಡ್ನ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಹಾಯವಾಣಿ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಮೇಲೆ ತೆರಳಿದ್ದ ಕವಿತಾ ಕೆಲ ದಿನ ಪೋಷಕರೊಂದಿಗೆ ಕಾಲ ಕಳೆದ ನಿನ್ನೆ ರತಲಾಮ್ಗೆ ವಾಪಸ್ ಆಗಿದ್ದರು.
ಪೊಲೀಸ್ ಇಲಾಖೆ ನೀಡಿದ್ದ ಕ್ವಾರ್ಟಸ್ನಲ್ಲಿ ಉಳಿದುಕೊಂಡಾಗ ವಿಷ ಸೇವಿಸಿದ್ದಾರೆ. ಇದರ ಬಗ್ಗೆ ಸಹದ್ಯೋಗಿಗೆ ಗೊತ್ತಾಗುತ್ತಿದ್ದಂತೆ ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ತಿವಾರಿ, ವಯಸ್ಸಾಗಿದ್ದರಿಂದ ಮದುವೆಯಾಗಿರಲಿಲ್ಲ. ಹೀಗಾಗಿ ಬೇಸರಗೊಂಡಿದ್ದರು. ಜತೆಗೆ ಮದುವೆ ಬಗ್ಗೆ ಜನರು ಪ್ರಶ್ನೆ ಮಾಡ್ತಿದ್ದರಿಂದ ಖಿನ್ನತೆಗೊಳಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
A 35-year- old woman sub-inspector (SI) allegedly committed suicide by consuming a poisonous substance in Ratlam district, police said on Thursday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm