ಬ್ರೇಕಿಂಗ್ ನ್ಯೂಸ್
12-07-21 04:06 pm Headline Karnataka News Network ದೇಶ - ವಿದೇಶ
ಚೆನ್ನೈ, ಜುಲೈ 12: ತಮಿಳುನಾಡಿನಲ್ಲಿ ರಾಜಕೀಯ ಪ್ರವೇಶ ಮಾಡುತ್ತಾರೆಂದು ಕಳೆದ ಒಂದು ವರ್ಷದಿಂದ ಸೆನ್ಸೇಶನ್ ಸೃಷ್ಟಿ ಮಾಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ರಾಜಕೀಯ ಪಾರ್ಟಿಯನ್ನೇ ವಿಸರ್ಜನೆ ಮಾಡಿದ್ದು, ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವುದೂ ಇಲ್ಲ ಎಂದು ಪ್ರಕಟಿಸಿದ್ದಾರೆ.
ರಜನಿ ಮಕ್ಕಳ್ ಮಂದ್ರಮ್ ಎನ್ನುವ ಪಕ್ಷವನ್ನು ವರ್ಷದ ಹಿಂದಷ್ಟೇ ರಜನಿಕಾಂತ್ ಸ್ಥಾಪನೆ ಮಾಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಮಾತುಗಳೂ ಕೇಳಿಬಂದಿದ್ದವು. ಆದರೆ, ರಜನಿ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

ಈಗ ವರ್ಷ ಕಳೆಯುತ್ತಲೇ ರಾಜಕೀಯ ಪಕ್ಷವನ್ನೇ ವಿಸರ್ಜಿಸುವುದಾಗಿ ಹೇಳಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಕೊರೊನಾ ಲಾಕ್ಡೌನ್ ಮತ್ತಿತರ ಕಾರಣಗಳಿಂದ ನಾವು ನಿರೀಕ್ಷೆ ಮಾಡಿದ್ದು ಸಾಧ್ಯವಾಗಲಿಲ್ಲ. ಹೀಗಾಗಿ ಭವಿಷ್ಯದಲ್ಲಿ ರಾಜಕೀಯಕ್ಕೆ ಕಾಲಿಡದಿರಲು ನಿರ್ಧರಿಸಿದ್ದೇನೆ ಎಂದು ರಜನಿ ಹೇಳಿದ್ದಾರೆ.
ಅಭಿಮಾನಿಗಳ ಸಭೆಯಲ್ಲಿ ಈ ಹೇಳಿಕೆಯನ್ನು ರಜನಿಕಾಂತ್ ನೀಡಿದ್ದಾರೆ. ಸಾಮಾಜಿಕ ಕೆಲಸ ಮುಂದುವರಿಸುವುದಕ್ಕಾಗಿ ರಜನಿ ಫ್ಯಾನ್ಸ್ ಫೋರಂ ಎನ್ನುವ ಹೆಸರಿನ ಅಭಿಮಾನಿಗಳ ಸಂಘ ಇರಲಿದೆ. ಅಮೆರಿಕದಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ರಜನಿಕಾಂತ್ ವಾರದ ಹಿಂದಷ್ಟೇ ಚೆನ್ನೈಗೆ ಮರಳಿದ್ದರು.
Rajinikanth said he had no intention of entering politics in the future and office-bearers of Rajini Makkal Mandram would continue to serve the public as part of Rajinikanth Fan Club Association.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm