ಬ್ರೇಕಿಂಗ್ ನ್ಯೂಸ್
12-07-21 04:06 pm Headline Karnataka News Network ದೇಶ - ವಿದೇಶ
ಚೆನ್ನೈ, ಜುಲೈ 12: ತಮಿಳುನಾಡಿನಲ್ಲಿ ರಾಜಕೀಯ ಪ್ರವೇಶ ಮಾಡುತ್ತಾರೆಂದು ಕಳೆದ ಒಂದು ವರ್ಷದಿಂದ ಸೆನ್ಸೇಶನ್ ಸೃಷ್ಟಿ ಮಾಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ರಾಜಕೀಯ ಪಾರ್ಟಿಯನ್ನೇ ವಿಸರ್ಜನೆ ಮಾಡಿದ್ದು, ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವುದೂ ಇಲ್ಲ ಎಂದು ಪ್ರಕಟಿಸಿದ್ದಾರೆ.
ರಜನಿ ಮಕ್ಕಳ್ ಮಂದ್ರಮ್ ಎನ್ನುವ ಪಕ್ಷವನ್ನು ವರ್ಷದ ಹಿಂದಷ್ಟೇ ರಜನಿಕಾಂತ್ ಸ್ಥಾಪನೆ ಮಾಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಮಾತುಗಳೂ ಕೇಳಿಬಂದಿದ್ದವು. ಆದರೆ, ರಜನಿ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

ಈಗ ವರ್ಷ ಕಳೆಯುತ್ತಲೇ ರಾಜಕೀಯ ಪಕ್ಷವನ್ನೇ ವಿಸರ್ಜಿಸುವುದಾಗಿ ಹೇಳಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಕೊರೊನಾ ಲಾಕ್ಡೌನ್ ಮತ್ತಿತರ ಕಾರಣಗಳಿಂದ ನಾವು ನಿರೀಕ್ಷೆ ಮಾಡಿದ್ದು ಸಾಧ್ಯವಾಗಲಿಲ್ಲ. ಹೀಗಾಗಿ ಭವಿಷ್ಯದಲ್ಲಿ ರಾಜಕೀಯಕ್ಕೆ ಕಾಲಿಡದಿರಲು ನಿರ್ಧರಿಸಿದ್ದೇನೆ ಎಂದು ರಜನಿ ಹೇಳಿದ್ದಾರೆ.
ಅಭಿಮಾನಿಗಳ ಸಭೆಯಲ್ಲಿ ಈ ಹೇಳಿಕೆಯನ್ನು ರಜನಿಕಾಂತ್ ನೀಡಿದ್ದಾರೆ. ಸಾಮಾಜಿಕ ಕೆಲಸ ಮುಂದುವರಿಸುವುದಕ್ಕಾಗಿ ರಜನಿ ಫ್ಯಾನ್ಸ್ ಫೋರಂ ಎನ್ನುವ ಹೆಸರಿನ ಅಭಿಮಾನಿಗಳ ಸಂಘ ಇರಲಿದೆ. ಅಮೆರಿಕದಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ರಜನಿಕಾಂತ್ ವಾರದ ಹಿಂದಷ್ಟೇ ಚೆನ್ನೈಗೆ ಮರಳಿದ್ದರು.
Rajinikanth said he had no intention of entering politics in the future and office-bearers of Rajini Makkal Mandram would continue to serve the public as part of Rajinikanth Fan Club Association.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am