ಬ್ರೇಕಿಂಗ್ ನ್ಯೂಸ್
13-07-21 12:51 pm Headline Karnataka News Network ದೇಶ - ವಿದೇಶ
ಬಾಗ್ದಾದ್, ಜುಲೈ 13: ದಕ್ಷಿಣ ಇರಾಕ್ ಪ್ರದೇಶದಲ್ಲಿ ಇರುವ ಕೊರೊನಾವೈರಸ್ ಆಸ್ಪತ್ರೆಯ ವಾರ್ಡಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 54 ಮಂದಿ ಪ್ರಾಣ ಬಿಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದಕ್ಷಿಣದ ನಾಸಿರಿಯಾ ನಗರದ ಅಲ್-ಹುಸೇನ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಮೈಯಲ್ಲಿ ತೀವ್ರವಾದ ಸುಟ್ಟ ಗಾಯಗಳಾಗಿವೆ. 54 ಮಂದಿ ಮೃತಪಟ್ಟಿದ್ದು, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.



3 ತಿಂಗಳ ಹಿಂದೆಯಷ್ಟೇ ಹೊಸ ವಾರ್ಡ್:
ಕಳೆದ ಮೂರು ತಿಂಗಳ ಹಿಂದೆಯಷ್ಟೇ ತೆರೆಯಲಾದ ಹೊಸ ವಾರ್ಡ್ನಲ್ಲಿ 70 ಹಾಸಿಗೆಗಳಿವೆ ಎಂದು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವಾಲಯವು ಬೆಂಕಿಯ ಕಾರಣದ ಬಗ್ಗೆ ಅಧಿಕೃತ ಅಂಕಿ-ಸಂಖ್ಯೆಯ ಬಗ್ಗೆ ಮಾಹಿತಿ ನೀಡಿಲ್ಲ.
ಅಗ್ನಿ ಅವಘಡ ನಡೆದ ಸಂದರ್ಭದಲ್ಲಿ ಕೊವಿಡ್-19 ವಾರ್ಡಿನಲ್ಲಿ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ 63 ಜನರಿದ್ದರು ಎಂದು ಧಿ ಖಾರ್ ಆರೋಗ್ಯ ಇಲಾಖೆಯ ವಕ್ತಾರ ಅಮ್ಮರ್ ಅಲ್-ಜಮಿಲಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೊವಿಡ್-19 ಆಸ್ಪತ್ರೆಯ ವಾರ್ಡ್ ಅನ್ನು ವೇಗವಾಗಿ ಹೊತ್ತಿಕೊಳ್ಳುವ ವಸ್ತುಗಳಿಂದಲೇ ಕಟ್ಟಲಾಗಿದೆ. ಈ ಹಿನ್ನೆಲೆಯಲ್ಲಿ ವಾರ್ಡ್ ಬೆಂಕಿಗೆ ಆಹುತಿಯಾಗಿದೆ ಎಂದು ಇರಾಕ್ನ ನಾಗರಿಕ ರಕ್ಷಣಾ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಖಾಲಿದ್ ಬೋಹನ್ ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದಾರೆ.
The death toll from the fire at a COVID-19 hospital ward in Iraq's Nasiriyah has increased to 54, the health department of the southern province of Dhi Qar has said.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am