ಬ್ರೇಕಿಂಗ್ ನ್ಯೂಸ್
13-07-21 02:50 pm Headline Karnataka News Network ದೇಶ - ವಿದೇಶ
ಜೈಪುರ, ಜುಲೈ 13: ಧರ್ಮವನ್ನು ಹೊರತುಪಡಿಸಿ ಭಾರತೀಯರೆಲ್ಲರ ಡಿಎನ್ಎ ಒಂದೇ. ಆಚರಣೆಯ ಆಧಾರದಲ್ಲಿ ಅವರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿರುವ ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಪ್ರಾಚಿ, ಗೋಮಾಂಸ ತಿನ್ನುವವರ ಡಿಎನ್ಎ ಹಿಂದೂಗಳಲ್ಲಿ ಎಂದಿಗೂ ಕಂಡುಬರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ರಾಜಸ್ಥಾನದ ದೌಸಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಧ್ವಿ , ಎಲ್ಲ ಭಾರತೀಯರು ಒಂದೇ ಡಿಎನ್ಎ ಹಂಚಿಕೊಂಡಿರಬಹುದು. ಆದರೆ, ಗೋಮಾಂಸ ತಿನ್ನುವವರ ಡಿಎನ್ಎ ನಮ್ಮವರ ನಡುವೆ ಕಂಡುಬರಲು ಸಾಧ್ಯವಿಲ್ಲ ಎಂದಿದ್ದಾರೆ.

ಇದೇ ವೇಳೆ ಸಾಧ್ವಿ ಜನಸಂಖ್ಯೆ ನಿಯಂತ್ರಣ ಕ್ರಮಕ್ಕೂ ಒತ್ತಾಯಿಸಿದ್ದಾರೆ. 'ದೇಶದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ಜಾರಿಯಾಗಬೇಕು. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಂದ ಮತ ಚಲಾಯಿಸುವ ಹಕ್ಕೂ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಹಿಂಪಡೆಯ ಬೇಕು' ಎಂದು ಆಗ್ರಹಿಸಿದ್ದಾರೆ.
'ನೀವು ಎಷ್ಟು ಪತ್ನಿಯರನ್ನು ಹೊಂದಿದ್ದೀರಿ ಎಂಬುದು ಮುಖ್ಯವಲ್ಲ, ಆದರೆ, ಇಬ್ಬರೇ ಮಕ್ಕಳಿರಬೇಕು ಎಂದು ಸಾಧ್ವಿ ಹೇಳಿದ್ದಾರೆ. ಲವ್ ಜಿಹಾದ್ ಬಗ್ಗೆಯೂ ಮಾತನಾಡಿದ ಅವರು, 'ರಾಜಸ್ಥಾನದಲ್ಲಿ ಪ್ರೇಮದ ಹೆಸರಿನಲ್ಲಿ ಲವ್ ಜಿಹಾದ್ ಮಾಡಲಾಗುತ್ತಿದ್ದು, ಹೆಣ್ಣು ಮಕ್ಕಳನ್ನು ಮೋಸ ಹಾಗೂ ಮತಾಂತರ ಮಾಡಲಾಗುತ್ತಿದೆ' ಎಂದು ಆರೋಪಿಸಿದ್ದಾರೆ.
'ಮತ ರಾಜಕೀಯವನ್ನು ಪಕ್ಕಕ್ಕಿಡಿ ಮತ್ತು ಹಿಂದು ಹೆಣ್ಣು ಮಕ್ಕಳ ರಕ್ಷಣೆಯತ್ತ ಗಮನಹರಿಸಿ' ಎನ್ನುವ ಮೂಲಕ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
Vishwa Hindu Parishad (VHP) leader Sadhvi Prachi is often in news for making statements. In a recent development, she has replied to Rashtriya Swayamsevak Sangh (RSS) chief Mohan Bhagwat's recent remark on DNA.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm