ಬ್ರೇಕಿಂಗ್ ನ್ಯೂಸ್
15-07-21 12:33 pm Headline Karnataka News Network ದೇಶ - ವಿದೇಶ
ಕಾರವಾರ, ಜುಲೈ 15; ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜುರನ್ನು ವರ್ಗಾವಣೆ ಮಾಡಲಾಗಿದೆ. ವರ್ತಿಕಾ ಕಟಿಯಾರ್ ನೂತನ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
ಬುಧವಾರ ಕರ್ನಾಟಕ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಉತ್ತರ ಕನ್ನಡದ ನೂತನ ಎಸ್ಪಿಯಾಗಿ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ನೇಮಕ ಮಾಡಲಾಗಿದೆ. ಜಿಲ್ಲೆಯ ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ಎನ್ನುವ ಹೆಗ್ಗಳಿಕೆಗೆ ವರ್ತಿಕಾ ಕಟಿಯಾರ್ ಪಾತ್ರವಾಗಲಿದ್ದಾರೆ.
ಮೂಲತಃ ಉತ್ತರ ಪ್ರದೇಶದವರಾದ ವರ್ತಿಕಾ 2010ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಈ ಹಿಂದೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಎಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಇದಾದ ನಂತರ ಕೊಡಗು ಹಾಗೂ ಧಾರವಾಡ ಎಸ್ಪಿಯಾಗಿ, ಅಲ್ಲದೇ ಕೆಎಸ್ಆರ್ಪಿ ಸಂಶೋಧನಾ ಕೇಂದ್ರದ ಎಸ್ಪಿಯಾಗಿ ಸಹ ಕಾರ್ಯನಿರ್ವಹಿಸಿದ್ದರು.

ಪ್ರಸ್ತುತ ರಾಜ್ಯ ಅಪರಾಧ ದಾಖಲೆಗಳ ವಿಭಾಗದಲ್ಲಿ (ಎಸ್ಸಿಬಿ) ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡಿರುವ ಹಾಲಿ ಎಸ್ಪಿ ಶಿವಪ್ರಕಾಶ್ ದೇವರಾಜುಗೆ ಸ್ಥಳ ನಿಯೋಜನೆ ಮಾಡಿಲ್ಲ.
ಉತ್ತರ ಕನ್ನಡ ಜಿಲ್ಲೆಗೆ ಈವರೆಗೆ ಮಹಿಳಾ ಅಧಿಕಾರಿಗಳು ಎಸ್ಪಿಯಾಗಿ ನೇಮಕವಾಗಿರಲಿಲ್ಲ. ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ಇಂಕಾಗ್ಲೋ ಜಮೀರ್ ಕರ್ತವ್ಯ ನಿರ್ವಹಿಸಿದ್ದರೆ, ಇದೀಗ ವರ್ತಿಕಾ ಕಟಿಯಾರ್ ಮೊದಲ ಮಹಿಳಾ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
The state government has posted Vartika Katiyar, IPS (RR 2010), as Superintendent of Police, Uttara Kannada, Karwar, while G Sangeetha, IPS (2011), has been posted as Superintendent of Police, Chamarajanagar.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm