ಬ್ರೇಕಿಂಗ್ ನ್ಯೂಸ್
15-07-21 12:33 pm Headline Karnataka News Network ದೇಶ - ವಿದೇಶ
ಕಾರವಾರ, ಜುಲೈ 15; ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜುರನ್ನು ವರ್ಗಾವಣೆ ಮಾಡಲಾಗಿದೆ. ವರ್ತಿಕಾ ಕಟಿಯಾರ್ ನೂತನ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
ಬುಧವಾರ ಕರ್ನಾಟಕ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಉತ್ತರ ಕನ್ನಡದ ನೂತನ ಎಸ್ಪಿಯಾಗಿ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ನೇಮಕ ಮಾಡಲಾಗಿದೆ. ಜಿಲ್ಲೆಯ ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ಎನ್ನುವ ಹೆಗ್ಗಳಿಕೆಗೆ ವರ್ತಿಕಾ ಕಟಿಯಾರ್ ಪಾತ್ರವಾಗಲಿದ್ದಾರೆ.
ಮೂಲತಃ ಉತ್ತರ ಪ್ರದೇಶದವರಾದ ವರ್ತಿಕಾ 2010ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಈ ಹಿಂದೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಎಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಇದಾದ ನಂತರ ಕೊಡಗು ಹಾಗೂ ಧಾರವಾಡ ಎಸ್ಪಿಯಾಗಿ, ಅಲ್ಲದೇ ಕೆಎಸ್ಆರ್ಪಿ ಸಂಶೋಧನಾ ಕೇಂದ್ರದ ಎಸ್ಪಿಯಾಗಿ ಸಹ ಕಾರ್ಯನಿರ್ವಹಿಸಿದ್ದರು.

ಪ್ರಸ್ತುತ ರಾಜ್ಯ ಅಪರಾಧ ದಾಖಲೆಗಳ ವಿಭಾಗದಲ್ಲಿ (ಎಸ್ಸಿಬಿ) ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡಿರುವ ಹಾಲಿ ಎಸ್ಪಿ ಶಿವಪ್ರಕಾಶ್ ದೇವರಾಜುಗೆ ಸ್ಥಳ ನಿಯೋಜನೆ ಮಾಡಿಲ್ಲ.
ಉತ್ತರ ಕನ್ನಡ ಜಿಲ್ಲೆಗೆ ಈವರೆಗೆ ಮಹಿಳಾ ಅಧಿಕಾರಿಗಳು ಎಸ್ಪಿಯಾಗಿ ನೇಮಕವಾಗಿರಲಿಲ್ಲ. ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ಇಂಕಾಗ್ಲೋ ಜಮೀರ್ ಕರ್ತವ್ಯ ನಿರ್ವಹಿಸಿದ್ದರೆ, ಇದೀಗ ವರ್ತಿಕಾ ಕಟಿಯಾರ್ ಮೊದಲ ಮಹಿಳಾ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
The state government has posted Vartika Katiyar, IPS (RR 2010), as Superintendent of Police, Uttara Kannada, Karwar, while G Sangeetha, IPS (2011), has been posted as Superintendent of Police, Chamarajanagar.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm