ಬ್ರೇಕಿಂಗ್ ನ್ಯೂಸ್
15-07-21 12:33 pm Headline Karnataka News Network ದೇಶ - ವಿದೇಶ
ಕಾರವಾರ, ಜುಲೈ 15; ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜುರನ್ನು ವರ್ಗಾವಣೆ ಮಾಡಲಾಗಿದೆ. ವರ್ತಿಕಾ ಕಟಿಯಾರ್ ನೂತನ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
ಬುಧವಾರ ಕರ್ನಾಟಕ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಉತ್ತರ ಕನ್ನಡದ ನೂತನ ಎಸ್ಪಿಯಾಗಿ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ನೇಮಕ ಮಾಡಲಾಗಿದೆ. ಜಿಲ್ಲೆಯ ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ಎನ್ನುವ ಹೆಗ್ಗಳಿಕೆಗೆ ವರ್ತಿಕಾ ಕಟಿಯಾರ್ ಪಾತ್ರವಾಗಲಿದ್ದಾರೆ.
ಮೂಲತಃ ಉತ್ತರ ಪ್ರದೇಶದವರಾದ ವರ್ತಿಕಾ 2010ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಈ ಹಿಂದೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಎಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಇದಾದ ನಂತರ ಕೊಡಗು ಹಾಗೂ ಧಾರವಾಡ ಎಸ್ಪಿಯಾಗಿ, ಅಲ್ಲದೇ ಕೆಎಸ್ಆರ್ಪಿ ಸಂಶೋಧನಾ ಕೇಂದ್ರದ ಎಸ್ಪಿಯಾಗಿ ಸಹ ಕಾರ್ಯನಿರ್ವಹಿಸಿದ್ದರು.

ಪ್ರಸ್ತುತ ರಾಜ್ಯ ಅಪರಾಧ ದಾಖಲೆಗಳ ವಿಭಾಗದಲ್ಲಿ (ಎಸ್ಸಿಬಿ) ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡಿರುವ ಹಾಲಿ ಎಸ್ಪಿ ಶಿವಪ್ರಕಾಶ್ ದೇವರಾಜುಗೆ ಸ್ಥಳ ನಿಯೋಜನೆ ಮಾಡಿಲ್ಲ.
ಉತ್ತರ ಕನ್ನಡ ಜಿಲ್ಲೆಗೆ ಈವರೆಗೆ ಮಹಿಳಾ ಅಧಿಕಾರಿಗಳು ಎಸ್ಪಿಯಾಗಿ ನೇಮಕವಾಗಿರಲಿಲ್ಲ. ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ಇಂಕಾಗ್ಲೋ ಜಮೀರ್ ಕರ್ತವ್ಯ ನಿರ್ವಹಿಸಿದ್ದರೆ, ಇದೀಗ ವರ್ತಿಕಾ ಕಟಿಯಾರ್ ಮೊದಲ ಮಹಿಳಾ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
The state government has posted Vartika Katiyar, IPS (RR 2010), as Superintendent of Police, Uttara Kannada, Karwar, while G Sangeetha, IPS (2011), has been posted as Superintendent of Police, Chamarajanagar.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am