ಬ್ರೇಕಿಂಗ್ ನ್ಯೂಸ್
16-07-21 11:37 am Headline Karnataka News Network ದೇಶ - ವಿದೇಶ
Photo credits : ANI @ ANI
ಭೋಪಾಲ್, ಜುಲೈ 16: ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸುವುದಕ್ಕೆ ಹೋಗಿ ಆವರಣ ಗೋಡೆ ಕುಸಿದು 30ಕ್ಕೂ ಹೆಚ್ಚು ಮಂದಿ ಬಾವಿಯೊಳಗೆ ಬಿದ್ದು ದುರಂತಕ್ಕೀಡಾದ ಘಟನೆ ಮಧ್ಯಪ್ರದೇಶದ ವಿಧಿಶಾ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲಾ ಕೇಂದ್ರದಿಂದ 50 ಕಿಲೋ ಮೀಟರ್ ದೂರದ ಗಂಜ್ ಬಸೋದಾ ಎಂಬಲ್ಲಿ ಘಟನೆ ನಡೆದಿದೆ. ಬಾವಿಗೆ ಬಿದ್ದ 30ಕ್ಕೂ ಹೆಚ್ಚು ಜನರ ಪೈಕಿ ನಾಲ್ವರು ಮೃತಪಟ್ಟಿದ್ದು, 19 ಜನರನ್ನು ರಕ್ಷಿಸಲಾಗಿದೆ. ಇನ್ನೂ 13 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಬಾಲಕಿ ಬಾವಿಗೆ ಬಿದ್ದಿದ್ದಳು. ಬಾಲಕಿಯ ರಕ್ಷಿಸುವುದಕ್ಕಾಗಿ ಕೆಲವರು ಬಾವಿಗೆ ಇಳಿದರೆ ಇತರರು ಸಹಾಯ ಮಾಡುವುದಕ್ಕಾಗಿ ಸುತ್ತಲಿನ ಆವರಣ ಗೋಡೆಯ ಮೇಲೆ ನಿಂತಿದ್ದರು. ಆದರೆ, ಆವರಣ ಗೋಡೆ ಭಾರ ತಾಳಲಾರದೆ ದಿಢೀರ್ ಕುಸಿದಿದ್ದು, ಅದರ ಮೇಲೆ ನಿಂತವರೆಲ್ಲ ಬಾವಿಗೆ ಬಿದ್ದಿದ್ದಾರೆ. ಈ ಪೈಕಿ ಕೆಲವರು ಗೋಡೆಯ ಅವಶೇಷಗಳಡಿ ಸಿಲುಕಿದರೆ, ಒಳಗಿದ್ದವರು ಗೋಡೆಯ ಕಲ್ಲುಗಳು ತಲೆಗೆ ಬಿದ್ದು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾತ್ರಿ 11 ಗಂಟೆ ವೇಳೆಗೆ ಟ್ರ್ಯಾಕ್ಟರ್ ಬಳಸಿ ಬಾವಿಗೆ ಬಿದ್ದವರ ರಕ್ಷಣಾ ಕಾರ್ಯಾಚರಣೆ ಶುರು ಮಾಡಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆ ಕುರಿತು ಸಚಿವ ವಿಶ್ವಾಸ್ ಸಾರಂಗ್ ಸ್ಪಷ್ಟನೆ ನೀಡಿದ್ದು ಈವರೆಗೆ 19 ಜನರನ್ನು ರಕ್ಷಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯೂ ಸ್ಥಳಕ್ಕೆ ಬಂದಿದ್ದು, ರಕ್ಷಣಾ ಕಾರ್ಯ ಚುರುಕುಗೊಳಿಸಲಾಗಿದೆ. ಈ ಪ್ರದೇಶದಲ್ಲಿ ಇಂಥ ಘಟನೆಗಳು ಮರುಕಳಿಸುತ್ತಿದ್ದು, ಕಾರ್ಯಾಚರಣೆ ಪೂರ್ಣಗೊಳ್ಳುವ ತನಕ ಕಾರಣ ಹೇಳುವುದಕ್ಕೆ ಸಾಧ್ಯವಾಗದು ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ
ಮಧ್ಯಪ್ರದೇಶದ ಗಂಜ್ ಬಸೋದಾದಲ್ಲಿ ನಡೆದಿರುವ ಘಟನೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಂತಾಪ ಸೂಚಿಸಿದ್ದಾರೆ. ಬಾವಿಗೆ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಇದರ ಜೊತೆ ಗಾಯಗೊಂಡವರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ಹಾಗೂ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
Around 30 people fell into a well in Madhya Pradesh's Vidisha on Thursday. While more than 15 people have been rescued, the search is on for those missing.
13-05-24 09:17 pm
Bangalore Correspondent
parishad elections, JDS, BJP: ಪರಿಷತ್ ಚುನಾವಣೆ...
13-05-24 05:57 pm
Prajwal Revanna, Ticket Cancelled: ಪ್ರಜ್ವಲ್ ರ...
13-05-24 04:34 pm
Bangalore accident, Minor, Boy killed: ರಸ್ತೆಯ...
13-05-24 03:02 pm
Shivamogga Accident: ಶಿವಮೊಗ್ಗ ; ಆಟೋಗೆ ಡಿಕ್ಕಿ...
13-05-24 01:04 pm
13-05-24 07:56 pm
HK News Desk
ಬುರ್ಖಾ ಹಾಕೊಂಡು ಬಂದಿದ್ದ ಮುಸ್ಲಿಂ ಮತದಾರರಿಗೆ ನಿಮ...
13-05-24 03:53 pm
ಮದುವೆ ಆದ್ರು ಡಾಕ್ಟರ್ ಲೇಡಿಗೆ ತೀರದ ದಾಹ ; ಇಬ್ಬರು...
11-05-24 09:43 pm
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
13-05-24 10:15 pm
Mangalore Correspondent
Udupi former MLA Raghupati bhat quits BJP: ಬಂ...
13-05-24 07:27 pm
Ashok Rai, Puttur: ಚುನಾವಣೆ ನೀತಿ ಸಂಹಿತೆ ಉಲ್ಲಂಘ...
13-05-24 02:27 pm
Tv Serial Helmet Fine Police: ಟಿವಿ ಸೀರಿಯಲ್ನಲ್...
12-05-24 06:30 pm
ಕುಂದಾಪುರದ ಫೈನಾನ್ಶಿಯರ್ ಹತ್ಯೆ ಆರೋಪಿಗೆ ಹಿರಿಯಡ್ಕ...
12-05-24 05:41 pm
13-05-24 07:15 pm
Giridhar, Mangaluru Correspondent
Part time job, crime, online fraud: ಆನ್ಲೈನ್...
13-05-24 04:10 pm
Fake Currency Notes, Mangalore, Crime: ಕಾಸರಗೋ...
12-05-24 01:53 pm
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm