ಬ್ರೇಕಿಂಗ್ ನ್ಯೂಸ್
16-07-21 11:37 am Headline Karnataka News Network ದೇಶ - ವಿದೇಶ
Photo credits : ANI @ ANI
ಭೋಪಾಲ್, ಜುಲೈ 16: ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸುವುದಕ್ಕೆ ಹೋಗಿ ಆವರಣ ಗೋಡೆ ಕುಸಿದು 30ಕ್ಕೂ ಹೆಚ್ಚು ಮಂದಿ ಬಾವಿಯೊಳಗೆ ಬಿದ್ದು ದುರಂತಕ್ಕೀಡಾದ ಘಟನೆ ಮಧ್ಯಪ್ರದೇಶದ ವಿಧಿಶಾ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲಾ ಕೇಂದ್ರದಿಂದ 50 ಕಿಲೋ ಮೀಟರ್ ದೂರದ ಗಂಜ್ ಬಸೋದಾ ಎಂಬಲ್ಲಿ ಘಟನೆ ನಡೆದಿದೆ. ಬಾವಿಗೆ ಬಿದ್ದ 30ಕ್ಕೂ ಹೆಚ್ಚು ಜನರ ಪೈಕಿ ನಾಲ್ವರು ಮೃತಪಟ್ಟಿದ್ದು, 19 ಜನರನ್ನು ರಕ್ಷಿಸಲಾಗಿದೆ. ಇನ್ನೂ 13 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಬಾಲಕಿ ಬಾವಿಗೆ ಬಿದ್ದಿದ್ದಳು. ಬಾಲಕಿಯ ರಕ್ಷಿಸುವುದಕ್ಕಾಗಿ ಕೆಲವರು ಬಾವಿಗೆ ಇಳಿದರೆ ಇತರರು ಸಹಾಯ ಮಾಡುವುದಕ್ಕಾಗಿ ಸುತ್ತಲಿನ ಆವರಣ ಗೋಡೆಯ ಮೇಲೆ ನಿಂತಿದ್ದರು. ಆದರೆ, ಆವರಣ ಗೋಡೆ ಭಾರ ತಾಳಲಾರದೆ ದಿಢೀರ್ ಕುಸಿದಿದ್ದು, ಅದರ ಮೇಲೆ ನಿಂತವರೆಲ್ಲ ಬಾವಿಗೆ ಬಿದ್ದಿದ್ದಾರೆ. ಈ ಪೈಕಿ ಕೆಲವರು ಗೋಡೆಯ ಅವಶೇಷಗಳಡಿ ಸಿಲುಕಿದರೆ, ಒಳಗಿದ್ದವರು ಗೋಡೆಯ ಕಲ್ಲುಗಳು ತಲೆಗೆ ಬಿದ್ದು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾತ್ರಿ 11 ಗಂಟೆ ವೇಳೆಗೆ ಟ್ರ್ಯಾಕ್ಟರ್ ಬಳಸಿ ಬಾವಿಗೆ ಬಿದ್ದವರ ರಕ್ಷಣಾ ಕಾರ್ಯಾಚರಣೆ ಶುರು ಮಾಡಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.


ಘಟನೆ ಕುರಿತು ಸಚಿವ ವಿಶ್ವಾಸ್ ಸಾರಂಗ್ ಸ್ಪಷ್ಟನೆ ನೀಡಿದ್ದು ಈವರೆಗೆ 19 ಜನರನ್ನು ರಕ್ಷಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯೂ ಸ್ಥಳಕ್ಕೆ ಬಂದಿದ್ದು, ರಕ್ಷಣಾ ಕಾರ್ಯ ಚುರುಕುಗೊಳಿಸಲಾಗಿದೆ. ಈ ಪ್ರದೇಶದಲ್ಲಿ ಇಂಥ ಘಟನೆಗಳು ಮರುಕಳಿಸುತ್ತಿದ್ದು, ಕಾರ್ಯಾಚರಣೆ ಪೂರ್ಣಗೊಳ್ಳುವ ತನಕ ಕಾರಣ ಹೇಳುವುದಕ್ಕೆ ಸಾಧ್ಯವಾಗದು ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ
ಮಧ್ಯಪ್ರದೇಶದ ಗಂಜ್ ಬಸೋದಾದಲ್ಲಿ ನಡೆದಿರುವ ಘಟನೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಂತಾಪ ಸೂಚಿಸಿದ್ದಾರೆ. ಬಾವಿಗೆ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಇದರ ಜೊತೆ ಗಾಯಗೊಂಡವರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ಹಾಗೂ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
Around 30 people fell into a well in Madhya Pradesh's Vidisha on Thursday. While more than 15 people have been rescued, the search is on for those missing.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm