ಬ್ರೇಕಿಂಗ್ ನ್ಯೂಸ್
17-07-21 05:44 pm Headline Karnataka News Network ದೇಶ - ವಿದೇಶ
ಖಾನ್ಪುರ, ಜುಲೈ 17: ಉತ್ತರ ಪ್ರದೇಶದ ಔರಾಯಾ ಜಿಲ್ಲೆಯ ರೈಲು ನಿಲ್ದಾಣದ ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್ ಒಬ್ಬ ಕಚೇರಿಯಲ್ಲಿ ಕುಡಿದು ಮಲಗಿದ್ದರಿಂದ ಒಂದೂವರೆ ಗಂಟೆ ಕಾಲ ರೈಲುಗಳನ್ನು ಸ್ಥಗಿತಗೊಳಿಸಿ, ವೈಪರೀತ್ಯಕ್ಕೆ ಕಾರಣವಾದ ಘಟನೆ ನಡೆದಿದೆ.
ದೆಹಲಿ-ಹೌರಾ ಮಾರ್ಗದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದ್ದು ಮೇಲಧಿಕಾರುಗಳು ಫೋನ್ ಮಾಡಿದರೂ ಸ್ವೀಕರಿಸದೆ ಅಧಿಕಾರಿ ತನ್ನ ಕಚೇರಿಯಲ್ಲೇ ನಿದ್ದೆಗೆ ಶರಣಾಗಿದ್ದ. ಬಳಿಕ ಬೇರೆ ಕಡೆಯಿಂದ ಅಧಿಕಾರಿಗಳು ಬಂದು ನೋಡಿದಾಗ, ಕುಡಿದು ನಿದ್ದೆಗೆ ಶರಣಾಗಿದ್ದು ಕಂಡುಬಂದಿದೆ.
ಇದರಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ವೈಶಾಲಿ ಎಕ್ಸ್ ಪ್ರೆಸ್, ಸಂಗಮ್ ಎಕ್ಸ್ ಪ್ರೆಸ್, ಫರಕ್ಕಾ ಮತ್ತು ಮಗಧ ಎಕ್ಸ್ ಪ್ರೆಸ್ ಸೇರಿದಂತೆ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಪ್ರಮುಖ ರೈಲುಗಳು ಹಾಗೂ ಸರಕು ಸಾಗಾಟದ ರೈಲುಗಳ ಸಂಚಾರವನ್ನು ವಿವಿಧ ನಿಲ್ದಾಣಗಳಲ್ಲಿ ತಡೆಹಿಡಿಯಲಾಗಿತ್ತು.
ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್ ಅನಿರುದ್ಧ ಕುಮಾರ್ ಕರ್ತವ್ಯ ಲೋಪ ಎಸಗಿದ ಅಧಿಕಾರಿಯಾಗಿದ್ದು ಆತನನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಘಟನೆ ಬಗ್ಗೆ ಇಲಾಖಾ ತನಿಖೆ ನಡೆಸುವುದಾಗಿ ಔರಾಯಾ ನಿಲ್ದಾಣದ ಸ್ಟೇಷನ್ ಮಾಸ್ಟರ್ ವಿಶ್ವಂಭರ್ ದಯಾಳ್ ತಿಳಿಸಿದ್ದಾರೆ.
An assistant station master at the Kanchausi Railway Station in Auraiya district of Uttar Pradesh was suspended after he allegedly got drunk during duty hours and slept off while trains waited close to two hours for a green signal to cross. When higher authorities were alerted about the delay, station superintendent Vishambhar Dayal Pandey rushed to the railway station and splashed water on Anirudh Kumar’s face. The trains awaiting green signals were then immediately given a go-ahead.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm