ಬ್ರೇಕಿಂಗ್ ನ್ಯೂಸ್
03-09-20 04:56 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್ 3: ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದಕ್ಕಾಗಿ ತೆಲಂಗಾಣದ ಬಿಜೆಪಿ ಶಾಸಕನೊಬ್ಬನ ಫೇಸ್ಬುಕ್ ಖಾತೆಯನ್ನು ಫೇಸ್ಬುಕ್ ಕಂಪೆನಿಯೇ ಬ್ಯಾನ್ ಮಾಡಿದೆ. ತೆಲಂಗಾಣ ರಾಜ್ಯದ ಏಕೈಕ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ವಿರುದ್ಧ ಫೇಸ್ಬುಕ್ ನಿಂದಲೇ ಬ್ಯಾನ್ ಮಾಡೋದಾಗಿ ಹೇಳಿದೆ. ಇದೇ ವೇಳೆ, ಇನ್ ಸ್ಟಾ ಗ್ರಾಮ್ ಕೂಡ ರಾಜಾ ಸಿಂಗ್ ಮೇಲೆ ನಿಷೇಧ ಹಾಕಿದೆ.
ರಾಜಾ ಸಿಂಗ್ ಅವರನ್ನು ನಾವು ಫೇಸ್ಬುಕ್ ಬಳಕೆಯಿಂದ ಹೊರಗಿಡುತ್ತಿದ್ದೇವೆ. ಅವರು ನಮ್ಮ ಫೇಸ್ಬುಕ್ ನಿಯಮವನ್ನು ಉಲ್ಲಂಘಿಸಿ, ಹಿಂಸೆ, ಪ್ರಚೋದನೆಗೆ ಕಾರಣವಾಗುವ ಅಂಶಗಳನ್ನು ಪೋಸ್ಟ್ ಮಾಡುತ್ತಿದ್ದರು. ಅದಕ್ಕೆ ಫೇಸ್ಬುಕ್ ವೇದಿಕೆ ಆಗಬಾರದೆಂಬ ನೆಲೆಯಲ್ಲಿ ಅವರನ್ನು ಫೇಸ್ಬುಕ್ಕಿಂದ ನಿಷೇಧ ವಿಧಿಸುತ್ತಿದ್ದೇವೆ ಎಂದು ಫೇಸ್ಬುಕ್ ಹೇಳಿಕೆಯಲ್ಲಿ ತಿಳಿಸಿದೆ.
ಇದೇ ವೇಳೆ, ರಾಜಾ ಸಿಂಗ್ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದು ನಾನು 2019ರಿಂದಲೇ ಫೇಸ್ಬುಕ್ ಬಳಕೆ ಮಾಡುತ್ತಿಲ್ಲ. 2018ರಲ್ಲಿ ನನ್ನ ಖಾತೆ ಹ್ಯಾಕ್ ಆಗಿತ್ತು. ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದೆ. ಈಗ ಮತ್ತೆ ಹೊಸ ಖಾತೆ ತೆರೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೊನ್ನೆ ಸೆಪ್ಟೆಂಬರ್ 1ರಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಗೆ ಭಾರತದಲ್ಲಿ ಫೇಸ್ಬುಕ್ ರಾಜಕೀಯಕ್ಕೆ ಬಳಕೆಯಾಗುತ್ತಿರುವ ಬಗ್ಗೆ ಪತ್ರ ಬರೆದಿದ್ದರು. ಪತ್ರ ಬರೆದ ಎರಡೇ ದಿನದಲ್ಲಿ ಫೇಸ್ಬುಕ್ ಬಿಜೆಪಿ ಶಾಸಕನನ್ನೇ ಫೇಸ್ಬುಕ್ಕಿಂದ ಬ್ಯಾನ್ ಮಾಡಿದ್ದು ಕಾಕತಾಳೀಯ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm