ಬ್ರೇಕಿಂಗ್ ನ್ಯೂಸ್
03-09-20 04:56 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್ 3: ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದಕ್ಕಾಗಿ ತೆಲಂಗಾಣದ ಬಿಜೆಪಿ ಶಾಸಕನೊಬ್ಬನ ಫೇಸ್ಬುಕ್ ಖಾತೆಯನ್ನು ಫೇಸ್ಬುಕ್ ಕಂಪೆನಿಯೇ ಬ್ಯಾನ್ ಮಾಡಿದೆ. ತೆಲಂಗಾಣ ರಾಜ್ಯದ ಏಕೈಕ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ವಿರುದ್ಧ ಫೇಸ್ಬುಕ್ ನಿಂದಲೇ ಬ್ಯಾನ್ ಮಾಡೋದಾಗಿ ಹೇಳಿದೆ. ಇದೇ ವೇಳೆ, ಇನ್ ಸ್ಟಾ ಗ್ರಾಮ್ ಕೂಡ ರಾಜಾ ಸಿಂಗ್ ಮೇಲೆ ನಿಷೇಧ ಹಾಕಿದೆ.
ರಾಜಾ ಸಿಂಗ್ ಅವರನ್ನು ನಾವು ಫೇಸ್ಬುಕ್ ಬಳಕೆಯಿಂದ ಹೊರಗಿಡುತ್ತಿದ್ದೇವೆ. ಅವರು ನಮ್ಮ ಫೇಸ್ಬುಕ್ ನಿಯಮವನ್ನು ಉಲ್ಲಂಘಿಸಿ, ಹಿಂಸೆ, ಪ್ರಚೋದನೆಗೆ ಕಾರಣವಾಗುವ ಅಂಶಗಳನ್ನು ಪೋಸ್ಟ್ ಮಾಡುತ್ತಿದ್ದರು. ಅದಕ್ಕೆ ಫೇಸ್ಬುಕ್ ವೇದಿಕೆ ಆಗಬಾರದೆಂಬ ನೆಲೆಯಲ್ಲಿ ಅವರನ್ನು ಫೇಸ್ಬುಕ್ಕಿಂದ ನಿಷೇಧ ವಿಧಿಸುತ್ತಿದ್ದೇವೆ ಎಂದು ಫೇಸ್ಬುಕ್ ಹೇಳಿಕೆಯಲ್ಲಿ ತಿಳಿಸಿದೆ.
ಇದೇ ವೇಳೆ, ರಾಜಾ ಸಿಂಗ್ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದು ನಾನು 2019ರಿಂದಲೇ ಫೇಸ್ಬುಕ್ ಬಳಕೆ ಮಾಡುತ್ತಿಲ್ಲ. 2018ರಲ್ಲಿ ನನ್ನ ಖಾತೆ ಹ್ಯಾಕ್ ಆಗಿತ್ತು. ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದೆ. ಈಗ ಮತ್ತೆ ಹೊಸ ಖಾತೆ ತೆರೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೊನ್ನೆ ಸೆಪ್ಟೆಂಬರ್ 1ರಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಗೆ ಭಾರತದಲ್ಲಿ ಫೇಸ್ಬುಕ್ ರಾಜಕೀಯಕ್ಕೆ ಬಳಕೆಯಾಗುತ್ತಿರುವ ಬಗ್ಗೆ ಪತ್ರ ಬರೆದಿದ್ದರು. ಪತ್ರ ಬರೆದ ಎರಡೇ ದಿನದಲ್ಲಿ ಫೇಸ್ಬುಕ್ ಬಿಜೆಪಿ ಶಾಸಕನನ್ನೇ ಫೇಸ್ಬುಕ್ಕಿಂದ ಬ್ಯಾನ್ ಮಾಡಿದ್ದು ಕಾಕತಾಳೀಯ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm