ಬ್ರೇಕಿಂಗ್ ನ್ಯೂಸ್
03-09-20 04:56 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್ 3: ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದಕ್ಕಾಗಿ ತೆಲಂಗಾಣದ ಬಿಜೆಪಿ ಶಾಸಕನೊಬ್ಬನ ಫೇಸ್ಬುಕ್ ಖಾತೆಯನ್ನು ಫೇಸ್ಬುಕ್ ಕಂಪೆನಿಯೇ ಬ್ಯಾನ್ ಮಾಡಿದೆ. ತೆಲಂಗಾಣ ರಾಜ್ಯದ ಏಕೈಕ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ವಿರುದ್ಧ ಫೇಸ್ಬುಕ್ ನಿಂದಲೇ ಬ್ಯಾನ್ ಮಾಡೋದಾಗಿ ಹೇಳಿದೆ. ಇದೇ ವೇಳೆ, ಇನ್ ಸ್ಟಾ ಗ್ರಾಮ್ ಕೂಡ ರಾಜಾ ಸಿಂಗ್ ಮೇಲೆ ನಿಷೇಧ ಹಾಕಿದೆ.
ರಾಜಾ ಸಿಂಗ್ ಅವರನ್ನು ನಾವು ಫೇಸ್ಬುಕ್ ಬಳಕೆಯಿಂದ ಹೊರಗಿಡುತ್ತಿದ್ದೇವೆ. ಅವರು ನಮ್ಮ ಫೇಸ್ಬುಕ್ ನಿಯಮವನ್ನು ಉಲ್ಲಂಘಿಸಿ, ಹಿಂಸೆ, ಪ್ರಚೋದನೆಗೆ ಕಾರಣವಾಗುವ ಅಂಶಗಳನ್ನು ಪೋಸ್ಟ್ ಮಾಡುತ್ತಿದ್ದರು. ಅದಕ್ಕೆ ಫೇಸ್ಬುಕ್ ವೇದಿಕೆ ಆಗಬಾರದೆಂಬ ನೆಲೆಯಲ್ಲಿ ಅವರನ್ನು ಫೇಸ್ಬುಕ್ಕಿಂದ ನಿಷೇಧ ವಿಧಿಸುತ್ತಿದ್ದೇವೆ ಎಂದು ಫೇಸ್ಬುಕ್ ಹೇಳಿಕೆಯಲ್ಲಿ ತಿಳಿಸಿದೆ.
ಇದೇ ವೇಳೆ, ರಾಜಾ ಸಿಂಗ್ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದು ನಾನು 2019ರಿಂದಲೇ ಫೇಸ್ಬುಕ್ ಬಳಕೆ ಮಾಡುತ್ತಿಲ್ಲ. 2018ರಲ್ಲಿ ನನ್ನ ಖಾತೆ ಹ್ಯಾಕ್ ಆಗಿತ್ತು. ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದೆ. ಈಗ ಮತ್ತೆ ಹೊಸ ಖಾತೆ ತೆರೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೊನ್ನೆ ಸೆಪ್ಟೆಂಬರ್ 1ರಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಗೆ ಭಾರತದಲ್ಲಿ ಫೇಸ್ಬುಕ್ ರಾಜಕೀಯಕ್ಕೆ ಬಳಕೆಯಾಗುತ್ತಿರುವ ಬಗ್ಗೆ ಪತ್ರ ಬರೆದಿದ್ದರು. ಪತ್ರ ಬರೆದ ಎರಡೇ ದಿನದಲ್ಲಿ ಫೇಸ್ಬುಕ್ ಬಿಜೆಪಿ ಶಾಸಕನನ್ನೇ ಫೇಸ್ಬುಕ್ಕಿಂದ ಬ್ಯಾನ್ ಮಾಡಿದ್ದು ಕಾಕತಾಳೀಯ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm