ಬ್ರೇಕಿಂಗ್ ನ್ಯೂಸ್
03-09-20 04:56 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್ 3: ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದಕ್ಕಾಗಿ ತೆಲಂಗಾಣದ ಬಿಜೆಪಿ ಶಾಸಕನೊಬ್ಬನ ಫೇಸ್ಬುಕ್ ಖಾತೆಯನ್ನು ಫೇಸ್ಬುಕ್ ಕಂಪೆನಿಯೇ ಬ್ಯಾನ್ ಮಾಡಿದೆ. ತೆಲಂಗಾಣ ರಾಜ್ಯದ ಏಕೈಕ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ವಿರುದ್ಧ ಫೇಸ್ಬುಕ್ ನಿಂದಲೇ ಬ್ಯಾನ್ ಮಾಡೋದಾಗಿ ಹೇಳಿದೆ. ಇದೇ ವೇಳೆ, ಇನ್ ಸ್ಟಾ ಗ್ರಾಮ್ ಕೂಡ ರಾಜಾ ಸಿಂಗ್ ಮೇಲೆ ನಿಷೇಧ ಹಾಕಿದೆ.
ರಾಜಾ ಸಿಂಗ್ ಅವರನ್ನು ನಾವು ಫೇಸ್ಬುಕ್ ಬಳಕೆಯಿಂದ ಹೊರಗಿಡುತ್ತಿದ್ದೇವೆ. ಅವರು ನಮ್ಮ ಫೇಸ್ಬುಕ್ ನಿಯಮವನ್ನು ಉಲ್ಲಂಘಿಸಿ, ಹಿಂಸೆ, ಪ್ರಚೋದನೆಗೆ ಕಾರಣವಾಗುವ ಅಂಶಗಳನ್ನು ಪೋಸ್ಟ್ ಮಾಡುತ್ತಿದ್ದರು. ಅದಕ್ಕೆ ಫೇಸ್ಬುಕ್ ವೇದಿಕೆ ಆಗಬಾರದೆಂಬ ನೆಲೆಯಲ್ಲಿ ಅವರನ್ನು ಫೇಸ್ಬುಕ್ಕಿಂದ ನಿಷೇಧ ವಿಧಿಸುತ್ತಿದ್ದೇವೆ ಎಂದು ಫೇಸ್ಬುಕ್ ಹೇಳಿಕೆಯಲ್ಲಿ ತಿಳಿಸಿದೆ.
ಇದೇ ವೇಳೆ, ರಾಜಾ ಸಿಂಗ್ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದು ನಾನು 2019ರಿಂದಲೇ ಫೇಸ್ಬುಕ್ ಬಳಕೆ ಮಾಡುತ್ತಿಲ್ಲ. 2018ರಲ್ಲಿ ನನ್ನ ಖಾತೆ ಹ್ಯಾಕ್ ಆಗಿತ್ತು. ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದೆ. ಈಗ ಮತ್ತೆ ಹೊಸ ಖಾತೆ ತೆರೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೊನ್ನೆ ಸೆಪ್ಟೆಂಬರ್ 1ರಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಗೆ ಭಾರತದಲ್ಲಿ ಫೇಸ್ಬುಕ್ ರಾಜಕೀಯಕ್ಕೆ ಬಳಕೆಯಾಗುತ್ತಿರುವ ಬಗ್ಗೆ ಪತ್ರ ಬರೆದಿದ್ದರು. ಪತ್ರ ಬರೆದ ಎರಡೇ ದಿನದಲ್ಲಿ ಫೇಸ್ಬುಕ್ ಬಿಜೆಪಿ ಶಾಸಕನನ್ನೇ ಫೇಸ್ಬುಕ್ಕಿಂದ ಬ್ಯಾನ್ ಮಾಡಿದ್ದು ಕಾಕತಾಳೀಯ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm