ಬ್ರೇಕಿಂಗ್ ನ್ಯೂಸ್
22-07-21 11:27 am Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಜುಲೈ 22: ಕೋವಿಡ್ನಿಂದ ಅದೇಷ್ಟೋ ಜನರು ತಮ್ಮ ಸಂಬಂಧಿಗಳು, ತಂದೆ-ತಾಯಿ ಕಳೆದುಕೊಂಡು ಸಂಕಷ್ಟಕ್ಕಿಡಾಗಿದ್ದಾರೆ. ಆದರೆ ಇಲ್ಲೊಬ್ಬ ಪ್ರೇಮಿ ತನ್ನ ಪ್ರಿಯತಮೆ ಕೋವಿಡ್ನಿಂದ ಮೃತಪಟ್ಟಿದ್ದಾಳೆಂದು ಆತ್ಮಹತ್ಯೆಗೆ ಶರಾಣಗಿರುವ ಘಟನೆ ಇಲ್ಲಿನ ಗಾಜುವಾಕ ಕಣಿತಿ ನಗರದಲ್ಲಿ ನಡೆದಿದೆ.
ಹೌದು, ತಾನು ಇಷ್ಟಪಟ್ಟಿದ್ದ ಯುವತಿ ಕೋವಿಡ್ ಸೊಂಕಿನಿಂದಾಗಿ ಕಳೆದ ಮೂರು ದಿನಗಳ ಹಿಂದೆ ಗುಂಟೂರಿನಲ್ಲಿ ಮೃತಪಟ್ಟಿದ್ದಾಳೆ. ಈ ವಿಷಯವನ್ನು ಜೀರ್ಣಿಸಿಕೊಳ್ಳದ ರೋಹಿತ್ ಕುಮಾರ್ (25) ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪರವಾಡ ತಾಲೂಕಿನ ದೇಶಪಾತ್ರುನಿಪಾಲೇ ಗ್ರಾಮದ ನಿವಾಸಿ ದಟ್ಟಿ ಕೃಷ್ಣಾರಾವು, ಶಾಂತಿ ದಂಪತಿ ಮಗ ರೋಹಿತ್ ಕುಮಾರ್ ಇಂಟರ್ ಮೀಡಿಯೆಟ್ ವರೆಗೆ ವ್ಯಾಸಂಗ ಮುಗಿಸಿದ್ದಾರೆ. ಹೋಟೆಲ್ ಆನ್ಲೈನ್ ಪಾರ್ಸಲ್ ಸರ್ವಿಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರು ಸ್ನೇಹಿತರೊಡನೆ ಸೇರಿ ರೋಹಿತ್ ಕಣಿತಿ ರಸ್ತೆ ನಗರದಲ್ಲಿ ವಾಸಿಸುತ್ತಿದ್ದನು. ಮಧ್ಯಾಹ್ನದವರೆಗೆ ಪಾರ್ಸಲ್ ನೀಡಿ ಬಂದಿದ್ದಾರೆ. ಮಧ್ಯಾಹ್ನ 2.30ರ ಸಮಯಕ್ಕೆ ನೇರ ರೂಂಗೆ ತೆರಳಿ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಜೆ ಸ್ನೇಹಿತರೆಲ್ಲರೂ ಕಾರ್ಯ ಮುಗಿಸಿಕೊಂಡು ರೂಂಗೆ ಬಂದಾಗ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಈ ಸಂಗತಿಯನ್ನು ಮೃತ ರೋಹಿತ್ ಪೋಷಕರಿಗೆ ತಿಳಿಸಿದರು.
ಅನಕಾಪಲ್ಲಿಯ ಯುವತಿಯನ್ನು ರೋಹಿತ್ ಪ್ರೀತಿಸುತ್ತಿದ್ದನು. ಕಳೆದ ಮೂರು ದಿನಗಳ ಹಿಂದೆ ಆಕೆ ಕೋವಿಡ್ನಿಂದ ಮೃತಪಟ್ಟಿದ್ದಾಳೆ. ಬೇರೆ ಯುವತಿಯೊಂದಿಗೆ ಮದುವೆ ಮಾಡುವುದಾಗಿ ಹೇಳಿದ್ದೇವೆ. ಆದ್ರೆ ಇದನ್ನೇ ನೆನಪು ಮಾಡಿಕೊಂಡು ರೋಹಿತ್ ತನ್ನ ಪ್ರಾಣ ಕಳೆದುಕೊಳ್ಳುತ್ತಾನೆ ಎಂದು ತಿಳಿದಿರಲಿಲ್ಲ ಅಂತಾ ಮೃತ ರೋಹಿತ್ ತಂದೆ ಕೃಷ್ಣರಾವು ಕಣ್ಣೀರು ಹಾಕಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ರವಾನಿಸಿದರು. ಈ ಘಟನೆ ಕುರಿತು ಗಾಜುವಾಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm