ಬ್ರೇಕಿಂಗ್ ನ್ಯೂಸ್
23-07-21 11:14 am Headline Karnataka News Network ದೇಶ - ವಿದೇಶ
Photo credits : aninews
ಶ್ರೀನಗರ, ಜುಲೈ 23: ಜಮ್ಮು ಮತ್ತು ಕಾಶ್ಮೀರದ ಸೋಪೋರ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಪೊಲೀಸರು ಇಬ್ಬರು ಎಲ್ಇಟಿ ಉಗ್ರರನ್ನು ಸದೆ ಬಡಿದಿದ್ದಾರೆ.
ಹತ್ಯೆಯಾದ ಇಬ್ಬರೂ ಉಗ್ರರು ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಇಬ್ಬರ ಪೈಕಿ ಒಬ್ಬ ಫಯಾಜ್ ವಾರ್ ಎಂದು ಗುರುತಿಸಲಾಗಿದ್ದು, ಈತ ಕಾಶ್ಮೀರದಲ್ಲಿ ನಡೆದಿದ್ದ ಹಲವು ದಾಳಿಯಲ್ಲಿ ಭಾಗಿಯಾಗಿದ್ದ. ಅಲ್ಲದೆ, ಸಾಕಷ್ಟು ನಾಗರೀಕರು ಹಾಗೂ ಭದ್ರತಾಪಡೆಗಳ ಸಿಬ್ಬಂದಿಯನ್ನೂ ಹತ್ಯೆ ಮಾಡಿದ್ದ ಎಂದು ಕಾಶ್ಮೀರದ ಐಜಿಪಿ ಮಾಹಿತಿ ನೀಡಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನ ವಾರ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅವರಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನ ವಾರ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅವರಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಉಗ್ರರು ಅಡಗಿರುವುದನ್ನು ಖಚಿತಪಡಿಸಿಕೊಂಡ ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ.
ಆದರೆ, ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಇದೀಗ ಆಪರೇಷನ್ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Two Lashkar-e-Taiba (LeT) terrorists were eliminated in an encounter at Warpora village in Sopore, Baramulla on Friday. Two terrorists have been killed in the encounter so far. Police have seized incriminating materials including arms and ammunition, the Kashmir Zone Police said.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm