ಬ್ರೇಕಿಂಗ್ ನ್ಯೂಸ್
25-07-21 01:43 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜುಲೈ 25: ಕೇರಳದಲ್ಲಿನ್ನು ಸರಕಾರಿ ನೌಕರರು ಯಾವುದೇ ಕಾರಣಕ್ಕೂ ವರದಕ್ಷಿಣೆ ಪಡೆಯುವಂತಿಲ್ಲ. ಈ ಬಗ್ಗೆ ರಾಜ್ಯ ಸರಕಾರ ಹೊಸತೊಂದು ಆದೇಶ ಮಾಡಿದ್ದು, ಎಲ್ಲ ಸರಕಾರಿ ನೌಕರರು ತಾವು ವರದಕ್ಷಿಣೆ ಪಡೆಯುವುದಿಲ್ಲ ಮತ್ತು ಕೊಡುವುದೂ ಇಲ್ಲ ಎಂದು ಸರಕಾರಕ್ಕೆ ಅಫಿಡವಿಟ್ ನೀಡಬೇಕಾಗಿದೆ.
ಸರಕಾರಿ ಕೆಲಸದಲ್ಲಿರುವ ಯುವಕರು ತಮ್ಮ ಮದುವೆಯಾದ ಒಂದು ತಿಂಗಳ ಒಳಗೆ ತಾನು ಯಾವುದೇ ರೀತಿಯಲ್ಲೂ ವರದಕ್ಷಿಣೆ ಪಡೆದಿಲ್ಲ ಎಂದು ಪತ್ನಿ, ಆಕೆಯ ತಂದೆ ಮತ್ತು ತನ್ನ ತಂದೆಯ ಜೊತೆ ಸೇರಿ ಸಹಿ ಹಾಕಿದ ಪತ್ರವನ್ನು ಸರಕಾರಿ ಕಚೇರಿಯಲ್ಲಿ ದೃಢೀಕರಿಸಿ ನೀಡಬೇಕಾಗಿದೆ. ಈ ಪತ್ರವನ್ನು ಮೇಲಧಿಕಾರಿಗಳ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ರವಾನೆ ಮಾಡಬೇಕು. ಅಲ್ಲದೆ, ಮದುವೆಯಾಗಿರುವ ಮಂದಿ ತಮ್ಮ ಮಕ್ಕಳ ವಿವಾಹದ ಸಂದರ್ಭದಲ್ಲಿ ವರದಕ್ಷಿಣೆ ಕೊಡುವುದಿಲ್ಲ ಎಂದೂ ದೃಢೀಕರಿಸಿ ಪತ್ರವನ್ನು ಸಲ್ಲಿಸಬೇಕಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಡೈರೆಕ್ಟರ್ ಆಗಿರುವ ಅನುಪಮಾ ಈ ಬಗ್ಗೆ ಎಲ್ಲ ಇಲಾಖೆಗಳಿಗೂ ಸುತ್ತೋಲೆ ಕಳುಹಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಆಯಾ ಇಲಾಖಾವಾರು ಮುಖ್ಯಸ್ಥರು ವರ್ಷದಲ್ಲಿ ಎರಡು ಬಾರಿ ಅಂದರೆ, ಎಪ್ರಿಲ್ ಮತ್ತು ಅಕ್ಟೋಬರ್ ನಲ್ಲಿ ತಮ್ಮ ನೌಕರರ ಬಗ್ಗೆ ಈ ರೀತಿಯ ಪತ್ರಗಳನ್ನು ಜಿಲ್ಲಾ ವರದಕ್ಷಿಣೆ ವಿರೋಧಿ ದಳದ ಅಧಿಕಾರಿಗೆ ಸಲ್ಲಿಸಬೇಕಾಗಿದೆ. ಕೇರಳ ರಾಜ್ಯ ಸರಕಾರ ಇತ್ತೀಚೆಗೆ ಕೇರಳ ವರದಕ್ಷಿಣೆ ನಿಷೇಧ ಕಾಯ್ದೆ – 2021 ಅನ್ನು ಜಾರಿಗೆ ತಂದಿದ್ದು ಇದರ ಪ್ರಕಾರ ಜಿಲ್ಲಾ ಮಟ್ಟದಲ್ಲಿ ವರದಕ್ಷಿಣೆ ವಿರೋಧಿ ದಳ ಅಧಿಕಾರಿಗಳು ಇರಲಿದ್ದಾರೆ. ಆಯಾ ಜಿಲ್ಲೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಅದಕ್ಕೆ ಮುಖ್ಯಸ್ಥರಾಗಿರುತ್ತಾರೆ.
ಕಳೆದ ಜೂನ್ ತಿಂಗಳಲ್ಲಿ ವರದಕ್ಷಿಣೆ ಕಿರುಕುಳಕ್ಕೀಡಾಗಿ ಮೂವರು ಯುವತಿಯರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದಿತ್ತು. ಬೆನ್ನು ಬೆನ್ನಿಗೆ ನಡೆದ ಈ ರೀತಿಯ ಪ್ರಕರಣಗಳು ರಾಜ್ಯದಲ್ಲಿ ಭಾರೀ ಸಂಚಲ
All male employees in Kerala government service should now submit a declaration if and when they get married stating that they have not taken dowry from the bride’s family. The declaration should be given within a month of the marriage, signed duly by the employee’s wife, father and father-in-law.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm