ಬ್ರೇಕಿಂಗ್ ನ್ಯೂಸ್
25-07-21 01:43 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜುಲೈ 25: ಕೇರಳದಲ್ಲಿನ್ನು ಸರಕಾರಿ ನೌಕರರು ಯಾವುದೇ ಕಾರಣಕ್ಕೂ ವರದಕ್ಷಿಣೆ ಪಡೆಯುವಂತಿಲ್ಲ. ಈ ಬಗ್ಗೆ ರಾಜ್ಯ ಸರಕಾರ ಹೊಸತೊಂದು ಆದೇಶ ಮಾಡಿದ್ದು, ಎಲ್ಲ ಸರಕಾರಿ ನೌಕರರು ತಾವು ವರದಕ್ಷಿಣೆ ಪಡೆಯುವುದಿಲ್ಲ ಮತ್ತು ಕೊಡುವುದೂ ಇಲ್ಲ ಎಂದು ಸರಕಾರಕ್ಕೆ ಅಫಿಡವಿಟ್ ನೀಡಬೇಕಾಗಿದೆ.
ಸರಕಾರಿ ಕೆಲಸದಲ್ಲಿರುವ ಯುವಕರು ತಮ್ಮ ಮದುವೆಯಾದ ಒಂದು ತಿಂಗಳ ಒಳಗೆ ತಾನು ಯಾವುದೇ ರೀತಿಯಲ್ಲೂ ವರದಕ್ಷಿಣೆ ಪಡೆದಿಲ್ಲ ಎಂದು ಪತ್ನಿ, ಆಕೆಯ ತಂದೆ ಮತ್ತು ತನ್ನ ತಂದೆಯ ಜೊತೆ ಸೇರಿ ಸಹಿ ಹಾಕಿದ ಪತ್ರವನ್ನು ಸರಕಾರಿ ಕಚೇರಿಯಲ್ಲಿ ದೃಢೀಕರಿಸಿ ನೀಡಬೇಕಾಗಿದೆ. ಈ ಪತ್ರವನ್ನು ಮೇಲಧಿಕಾರಿಗಳ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ರವಾನೆ ಮಾಡಬೇಕು. ಅಲ್ಲದೆ, ಮದುವೆಯಾಗಿರುವ ಮಂದಿ ತಮ್ಮ ಮಕ್ಕಳ ವಿವಾಹದ ಸಂದರ್ಭದಲ್ಲಿ ವರದಕ್ಷಿಣೆ ಕೊಡುವುದಿಲ್ಲ ಎಂದೂ ದೃಢೀಕರಿಸಿ ಪತ್ರವನ್ನು ಸಲ್ಲಿಸಬೇಕಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಡೈರೆಕ್ಟರ್ ಆಗಿರುವ ಅನುಪಮಾ ಈ ಬಗ್ಗೆ ಎಲ್ಲ ಇಲಾಖೆಗಳಿಗೂ ಸುತ್ತೋಲೆ ಕಳುಹಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಆಯಾ ಇಲಾಖಾವಾರು ಮುಖ್ಯಸ್ಥರು ವರ್ಷದಲ್ಲಿ ಎರಡು ಬಾರಿ ಅಂದರೆ, ಎಪ್ರಿಲ್ ಮತ್ತು ಅಕ್ಟೋಬರ್ ನಲ್ಲಿ ತಮ್ಮ ನೌಕರರ ಬಗ್ಗೆ ಈ ರೀತಿಯ ಪತ್ರಗಳನ್ನು ಜಿಲ್ಲಾ ವರದಕ್ಷಿಣೆ ವಿರೋಧಿ ದಳದ ಅಧಿಕಾರಿಗೆ ಸಲ್ಲಿಸಬೇಕಾಗಿದೆ. ಕೇರಳ ರಾಜ್ಯ ಸರಕಾರ ಇತ್ತೀಚೆಗೆ ಕೇರಳ ವರದಕ್ಷಿಣೆ ನಿಷೇಧ ಕಾಯ್ದೆ – 2021 ಅನ್ನು ಜಾರಿಗೆ ತಂದಿದ್ದು ಇದರ ಪ್ರಕಾರ ಜಿಲ್ಲಾ ಮಟ್ಟದಲ್ಲಿ ವರದಕ್ಷಿಣೆ ವಿರೋಧಿ ದಳ ಅಧಿಕಾರಿಗಳು ಇರಲಿದ್ದಾರೆ. ಆಯಾ ಜಿಲ್ಲೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಅದಕ್ಕೆ ಮುಖ್ಯಸ್ಥರಾಗಿರುತ್ತಾರೆ.
ಕಳೆದ ಜೂನ್ ತಿಂಗಳಲ್ಲಿ ವರದಕ್ಷಿಣೆ ಕಿರುಕುಳಕ್ಕೀಡಾಗಿ ಮೂವರು ಯುವತಿಯರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದಿತ್ತು. ಬೆನ್ನು ಬೆನ್ನಿಗೆ ನಡೆದ ಈ ರೀತಿಯ ಪ್ರಕರಣಗಳು ರಾಜ್ಯದಲ್ಲಿ ಭಾರೀ ಸಂಚಲ
All male employees in Kerala government service should now submit a declaration if and when they get married stating that they have not taken dowry from the bride’s family. The declaration should be given within a month of the marriage, signed duly by the employee’s wife, father and father-in-law.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm