ಬ್ರೇಕಿಂಗ್ ನ್ಯೂಸ್
27-07-21 10:50 am Headline Karnataka News Network ದೇಶ - ವಿದೇಶ
Photo credits : Representative Image
ನವದೆಹಲಿ, ಜುಲೈ 27: ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.
ಇನ್ನುಮುಂದೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಯಾವುದೇ ಕಾರಣಕ್ಕೂ ಪರವಾನಗಿ ನೀಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಹೆದ್ದಾರಿಗಳಿಂದ 500 ಮೀಟರ್ ಅಂತರದೊಳಗೆ ಯಾವುದೇ ಮದ್ಯದಂಗಡಿಗಳೂ ಇರುವಂತಿಲ್ಲ ಎಂದು ಆದೇಶಿಸಲಾಗಿದೆ. ಅಂತೆಯೇ, ಸ್ಥಳೀಯ ಆಡಳಿತದ ವ್ಯಾಪ್ತಿಯಲ್ಲಿರುವ ಹಾಗೂ 20,000ಕ್ಕಿಂತ ಕಡಿಮೆ ಜನರು ವಾಸ ಮಾಡುವ ಸ್ಥಳಗಳಲ್ಲಿರುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದ 220 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಮದ್ಯವನ್ನು ಮಾರಾಟ ಮಾಡುವಂತಿಲ್ಲ ಎಂದೂ ತಿಳಿಸಿದೆ.



ಹೀಗಾಗಿ, ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಷ್ಟ್ರೀಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿ ಎಷ್ಟು ಮದ್ಯದಂಗಡಿಗಳಿವೆ, ಎಷ್ಟು ಮದ್ಯದಂಗಡಿಗಳನ್ನು ತೆರವುಗೊಳಿಸಬೇಕೆಂಬ ಬಗ್ಗೆ ಯಾವುದೇ ಅಂಕಿ-ಅಂಶಗಳನ್ನು ಕಲೆಹಾಕಿಲ್ಲ. ಈ ಕೆಲಸವನ್ನು ಆಯಾ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ಮಾಡಲಿವೆ.
ಸುಪ್ರೀಂ ಕೋರ್ಟ್ನಿಂದ ಈ ಆದೇಶ ಘೋಷಣೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈ ಬಗ್ಗೆ ಆದೇಶವನ್ನು ಕಳುಹಿಸಿದೆ.
ಮದ್ಯದಂಗಡಿಗಳಿಗೆ ಪರವಾನಗಿ ನೀಡುವಾಗ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ಸೂಚನೆ ನೀಡಿದೆ.
ಹಾಗೆಯೇ, ಕುಡಿದು ವಾಹನ ಚಲಾಯಿಸುವವರಿಗೆ ನೀಡಲಾಗುವುದನ್ನು ತಡೆಯಲು ಸೂಕ್ತ ಅಭಿಯಾನಗಳನ್ನು ನಡೆಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
As per the orders of the apex court, the Ministry of Road Transport & Highways (MoRTH) requested state governments and UTs, from time to time, to take necessary action for the implementation of the order.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm