ಬ್ರೇಕಿಂಗ್ ನ್ಯೂಸ್
31-07-21 02:17 pm Mangaluru Correspondent ದೇಶ - ವಿದೇಶ
ಮಂಗಳೂರು, ಜುಲೈ 31: ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಆ ರಾಜ್ಯಗಳಿಂದ ಕರ್ನಾಟಕ ಪ್ರವೇಶ ಮಾಡುವ ಜನರಿಗೆ ಹೆಚ್ಚುವರಿ ನಿರ್ಬಂಧ ವಿಧಿಸಲಾಗಿದೆ. ಕರ್ನಾಟಕಕ್ಕೆ ಗಡಿಭಾಗದಿಂದ ರಸ್ತೆ ಮೂಲಕ ಅಥವಾ ರೈಲು, ವಿಮಾನದಲ್ಲಿ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಗಳ ಒಳಗೆ ಮಾಡಿರುವ ಆರ್ ಟಿಪಿಸಿಆರ್ ಪರೀಕ್ಷೆ ವರದಿಯನ್ನು ಹೊಂದಿರಬೇಕು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಳೆದ ಬಾರಿ ಒಂದು ಡೋಸ್ ಪಡೆದಿದ್ದ ಪ್ರಯಾಣಿಕರಿಗೆ ರಿಯಾಯಿತಿ ಕೊಡಲಾಗಿತ್ತು. ಈ ಬಾರಿ ಎರಡು ಡೋಸ್ ಲಸಿಕೆ ಪಡೆದಿದ್ದರೂ, ಕೋವಿಡ್ ನೆಗೆಟಿವಿ ಪ್ರಮಾಣಪತ್ರ ಹೊಂದಿರುವುದನ್ನು ಕಡ್ಡಾಯ ಮಾಡಲಾಗಿದೆ. ರೈಲು ಮತ್ತು ವಿಮಾನದಲ್ಲಿ ಬರುವ ಪ್ರಯಾಣಿಕರಿಗೆ ಆಯಾ ಭಾಗದಲ್ಲಿ ಟಿಕೆಟ್ ದೃಢಪಡಿಸುವ ವೇಳೆಯಲ್ಲೇ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರುವುದನ್ನು ದೃಢಪಡಿಸಿಕೊಳ್ಳಬೇಕು. ರೈಲಿನಲ್ಲಿ ಟಿಕೆಟ್ ಪಡೆದು ಪ್ರಯಾಣಿಸುವವರನ್ನು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಇರುವುದನ್ನು ದೃಢೀಕರಿಸುವುದು ರೈಲ್ವೇ ಇಲಾಖೆಯ ಜವಾಬ್ದಾರಿಯಾಗಿರುತ್ತದೆ.





ಬಸ್ಸಿನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರನ್ನು ನೆಗೆಟಿವ್ ರಿಪೋರ್ಟ್ ಹೊಂದಿದ್ದಾರೆಯೇ ಎಂಬುದನ್ನು ಆಯಾ ಬಸ್ಸಿನ ನಿರ್ವಾಹಕರೇ ಖಚಿತಪಡಿಸಿಕೊಳ್ಳಬೇಕು. ಕೇರಳದಿಂದ ಶಿಕ್ಷಣ, ಉದ್ಯೋಗ ಇನ್ನಿತರ ಕೆಲಸಗಳಿಗಾಗಿ ಕರ್ನಾಟಕ ಪ್ರವೇಶ ಮಾಡುವವರು 15 ದಿನಗಳಿಗೊಮ್ಮೆ ಆರ್ ಟಿಪಿ ಸಿಆರ್ ಟೆಸ್ಟ್ ಮಾಡಿಕೊಳ್ಳಬೇಕು. ಕೇರಳಕ್ಕೆ ಹೊಂದಿಕೊಂಡಿರುವ ಗಡಿಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರಿನಲ್ಲಿ ಆಯಾ ಭಾಗದಲ್ಲಿ ಚೆಕ್ ಪೋಸ್ಟ್ ಮೂಲಕ ಪೊಲೀಸರು ಪ್ರಯಾಣಿಕರು ಮತ್ತು ಖಾಸಗಿ ವಾಹನಗಳ ಚಾಲಕರ ಮೇಲೆ ನಿಗಾ ಇಡಬೇಕು. ಈ ಜವಾಬ್ದಾರಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಇರುತ್ತದೆ.
ಉಳಿದಂತೆ, ಸಾಂವಿಧಾನಿಕ ಕರ್ತವದಲ್ಲಿ ತೊಡಗಿರುವ ಅಧಿಕಾರಿಗಳು, ವೈದ್ಯಕೀಯ ಸಿಬಂದಿಗಳು, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಕುಟುಂಬಸ್ಥರ ಮರಣ, ವೈದ್ಯಕೀಯ ಚಿಕಿತ್ಸೆ ಇತ್ಯಾದಿ ತುರ್ತು ಕಾರಣಗಳಿಗೆ ಪ್ರಯಾಣಿಸುವವರಿಗೆ ಕೋವಿಡ್ ನೆಗೆಟಿವ್ ನಿರ್ಬಂಧ ಇರುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
COVID-19 negative certificate from an RT-PCR test will be made mandatory for people coming from Kasaragod in Kerala into Dakshina Kannada orders DC of Mangalore Dr Rajendra Kumar. Following an alarming surge in daily COVID-19 cases, the Kerala government on Thursday (July 29, 2021) announced that it will impose a complete weekend lockdown on July 31, 2021 and August 1, 2021. Some of the worst affected districts in Kerala are Malappuram, Thrissur, Kozhikode, Ernakulam, Palakkad, Kollam, Alappuzha, Kannur, Thiruvananthapuram and Kottayam.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm