ಬ್ರೇಕಿಂಗ್ ನ್ಯೂಸ್
05-09-20 10:57 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.5: ಭಾರತದಲ್ಲಿ 30 ಲಕ್ಷ ಕೊರೋನ ವೈರಸ್ ಸೋಂಕು ಪ್ರಕರಣಗಳು ದಾಖಲಾದ ಕೇವಲ 13 ದಿನಗಳಲ್ಲಿ ಮತ್ತೆ 10 ಲಕ್ಷ ಪ್ರಕರಣಗಳು ಸೇರ್ಪಡೆಯಾಗಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ.
ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಶುಕ್ರವಾರ ಮತ್ತೊಂದು ದಾಖಲೆ ನಿರ್ಮಾಣವಾಗಿದ್ದು, ಇದುವರೆಗಿನ ಗರಿಷ್ಠ ಅಂದರೆ 87,800 ಪ್ರಕರಣಗಳು ಶುಕ್ರವಾರ ಸೇರ್ಪಡೆಯಾಗಿವೆ. ಸತತ ಮೂರನೇ ದಿನ ದೇಶದಲ್ಲಿ ಗರಿಷ್ಠ ಪ್ರಕರಣಗಳು ದಾಖಲಾಗಿವೆ.
ಅಮೆರಿಕ ಹಾಗೂ ಬ್ರೆಝಿಲ್ ದೇಶಗಳನ್ನು ಹೊರತುಪಡಿಸಿದರೆ 40 ಲಕ್ಷ ಪ್ರಕರಣಗಳು ವರದಿಯಾದ ಮೂರನೇ ದೇಶವಾಗಿ ಭಾರತ ಸೇರ್ಪಡೆಯಾಗಿದೆ. ಭಾರತದಲ್ಲಿ ಮೊದಲ 10 ಲಕ್ಷ ಪ್ರಕರಣಗಳು ದಾಖಲಾಗಲು ಸುಧೀರ್ಘ ಅವಧಿ (168 ದಿನ) ತೆಗೆದುಕೊಂಡಿದ್ದು, ಬಳಿಕ ಪ್ರಕರಣಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ.
ದೇಶದಲ್ಲಿ 10 ಲಕ್ಷ ಇದ್ದ ಪ್ರಕರಣಗಳು ಕೇವಲ 50 ದಿನಗಳಲ್ಲಿ 40 ಲಕ್ಷಕ್ಕೆ ಬೆಳೆದಿವೆ. ಬ್ರೆಝಿಲ್ನಲ್ಲಿ ಈ ಪ್ರಮಾಣದ ಬೆಳವಣಿಗೆಗೆ 75 ದಿನ ತೆಗೆದುಕೊಂಡಿದ್ದರೆ, ಅಮೆರಿಕದಲ್ಲಿ 86 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ 10 ಲಕ್ಷದಿಂದ 40 ಲಕ್ಷಕ್ಕೇರಿತ್ತು. ಕೊನೆಯ 10 ಲಕ್ಷ ಪ್ರಕರಣಗಳು ಅತ್ಯಂತ ಕ್ಷಿಪ್ರ ಅವಧಿಯಲ್ಲಿ ವರದಿಯಾಗಿದ್ದು, ಕೇವಲ 13 ದಿನಗಳಲ್ಲಿ 10 ಲಕ್ಷ ಪ್ರಕರಣ ದಾಖಲಾಗಿದೆ. ಇದುವರೆಗಿನ ದಾಖಲೆ ಅಮೆರಿಕ ಹಾಗೂ ಭಾರತದ ಜಂಟಿ ಹೆಸರಿನಲ್ಲಿದ್ದು, 16 ದಿನಗಳಲ್ಲಿ 10 ಲಕ್ಷ ಪ್ರಕರಣಗಳು ದಾಖಲಾಗಿದ್ದವು.

ಆದಾಗ್ಯೂ ಸೋಂಕಿತರ ಪೈಕಿ ಮೃತಪಟ್ಟವರ ದರ ಈ ಮೂರು ದೇಶಗಳ ಪೈಕಿ ಭಾರತದಲ್ಲೇ ಕನಿಷ್ಠ. 40 ಲಕ್ಷ ಒಟ್ಟು ಸೋಂಕಿತರ ಪೈಕಿ ಭಾರತದಲ್ಲಿ ಮೃತಪಟ್ಟವರು 69,552. ಇದೇ ಹಂತದಲ್ಲಿ ಅಮೆರಿಕದಲ್ಲಿ 1.4 ಲಕ್ಷ ಮಂದಿ ಹಾಗೂ ಬ್ರೆಝಿಲ್ನಲ್ಲಿ 1.2 ಲಕ್ಷ ಮಂದಿ ಸೋಂಕಿಗೆ ಬಲಿಯಾಗಿದ್ದರು.
ಶುಕ್ರವಾರ ದೇಶದಲ್ಲಿ 87,852 ಹೊಸ ಪ್ರಕರಣಗಳು ದಾಖಲಾಗಿದ್ದು, ಮಹಾರಾಷ್ಟ್ರದಲ್ಲಿ ಗರಿಷ್ಠ ಅಂದರೆ 19,218 ಪ್ರಕರಣಗಳು ವರದಿಯಾಗಿವೆ ಎಂದು ರಾಜ್ಯ ಸರ್ಕಾರಗಳಿಂದ ಸಂಗ್ರಹಿಸಿದ ಅಂಕಿ ಅಂಶಗಳಿಂದ ತಿಳಿದುಬಂದಿದೆ. 1062 ಮಂದಿ ಶುಕ್ರವಾರ ಸೋಂಕಿನಿಂದ ಮೃತಪಟ್ಟಿದ್ದಾರೆ. ಸತತ ನಾಲ್ಕನೇ ದಿನ ದೇಶದಲ್ಲಿ ಸಾವಿರಕ್ಕೂ ಅಧಿಕ ಮಂದಿ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17 ಸಾವಿರದಷ್ಟು ಹೆಚ್ಚಿ 8.5 ಲಕ್ಷದ ಸನಿಹಕ್ಕೆ ಬಂದಿದೆ.
ಇನ್ನು ಸಮಾಧಾನಕರ ವಿಷಯವೇನೆಂದರೆ ಇಲ್ಲಿಯವರೆಗೂ ದೇಶದಲ್ಲಿ ಸುಮಾರು 31 ಲಕ್ಷ ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದು, ಚೇತರಿಕೆಯ ಪ್ರಮಾಣವು ಶೇಕಡಾ 77.2 ಕ್ಕೆ ಏರಿಕೆಯಾಗಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm