ಬ್ರೇಕಿಂಗ್ ನ್ಯೂಸ್
10-08-21 12:17 pm Headline Karnataka News Network ದೇಶ - ವಿದೇಶ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಸೋಮವಾರ ಆಯೋಜಿಸಿದ್ದ ಜಾಥಾದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಕೀಲ ಮತ್ತು ಬಿಜೆಪಿ ಮಾಜಿ ವಕ್ತಾರ ಅಶ್ವನಿ ಉಪಾಧ್ಯಾಯ ಸೇರಿದಂತೆ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಅಶ್ವಿನಿ ಉಪಾಧ್ಯಾಯ, ವಿನೋದ್ ಶರ್ಮಾ, ದೀಪಕ್ ಸಿಂಗ್, ವಿನೀತ್ ಕ್ರಾಂತ್, ಪ್ರೀತ್ ಸಿಂಗ್ ಹಾಗೂ ದೀಪಕ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ. ವಿಚಾರಣೆ ಬಳಿಕ ಆರು ಮಂದಿಯನ್ನೂ ಬಂಧನಕ್ಕೊಳಪಡಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ದೇಶದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ವಸಾಹತು ಕಾಲದ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ಪ್ರಚೋದನಾಕಾರಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸಲಾಗಿದೆ. ಇದರಂತೆ ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 153-ಎ (ವಿಭಿನ್ನ ಗುಂಪುಗಳ ನಡುವೆ ವೈರತ್ವ ಪ್ರಚೋದಿಸುವುದು) ಅಡಿ ಎಫ್ಐಆರ್ಗಳನ್ನು ದಾಖಲಿಸಲಾಗಿತ್ತು.
ಅಲ್ಲದೆ, ಅವರು ಮೆರವಣಿಗೆಗೆ ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ ಹಾಗೂ ಸೆಕ್ಷನ್ 188 (ಸಾರ್ವಜನಿಕ ಸೇವಕರು ಜಾರಿಗೊಳಿಸಿದ ಆದೇಶಗಳನ್ನು ಪಾಲಿಸದೆ ಇರುವುದು) ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸುವ ಡಿಡಿಎಂಎ ಕಾಯ್ದೆಯ ಸೆಕ್ಷನ್ 51ರ ಅಡಿ ಕೂಡ ಪ್ರಕರಣಗಳನ್ನು ದಾಖಲಿಸಲಾಗಿದೆ.
ಅನುಮತಿ ಪಡೆಯದೆಯೇ ರ್ಯಾಲಿ ನಡೆಸಿದ್ದ ಹಿನ್ನೆಲೆಯಲ್ಲಿ ಈ ಸಂದರ್ಭದಲ್ಲಿ ಯಾವುದೇ ಪೊಲೀಸರು ಸ್ಥಳದಲ್ಲಿ ಹಾಜರಿರಲಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿತ್ತು. ಆದರೂ ಜನರು ಗುಂಪುಗೂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ashwani upadhyay and others involved in yesterdays incident to be arrested delhi police
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm