ಬ್ರೇಕಿಂಗ್ ನ್ಯೂಸ್
01-08-20 11:53 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ (ಆ. 01): ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಶಿಪ್ಯಾರ್ಡ್ ಬಳಿ ಬೃಹತ್ ಕ್ರೇನ್ವೊಂದನ್ನು ಸ್ಥಾಪಿಸುವ ವೇಳೆ ಅದು ಕುಸಿದುಬಿದ್ದು ಹನ್ನೊಂದು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ
ದುರಂತ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನ ಕೈಗೊಂಡರೆನ್ನಲಾಗಿದೆ. ನಾಲ್ಕು ಮೃತ ದೇಹಗಳನ್ನ ಸದ್ಯ ಹೊರತೆಗೆಯಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ವಿಶಾಖಪಟ್ಟಣಂನ ಬಂದರಿನಲ್ಲಿರುವ ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಹಡಗುದಾಣದಲ್ಲಿ ನೂತನ ಕ್ರೇನ್ ಅನ್ನು ಇನ್ಸ್ಟಾಲ್ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅನುಪಮ್ ಹೆಸರಿನ ಈ ಕ್ರೇನ್ ಬರೋಬ್ಬರಿ 70 ಟನ್ ತೂಕ ಇದೆ. ಇದರ ಸಂಯೋಜನೆ ಎಲ್ಲವೂ ಆಗಿ ಪೂರ್ಣಪ್ರಮಾಣದ ಕಾರ್ಯಾಚರಣೆಗೆ ಇಳಿಸುವ ಮುನ್ನ ಟ್ರಯಲ್ ರನ್ ಮಾಡಲಾಗುತ್ತಿತ್ತು.
ಮೃತಪಟ್ಟವರಲ್ಲಿ ನಾಲ್ವರು ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಇನ್ನುಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ.
ಶಿಪ್ಯಾರ್ಡ್ ಸಂಸ್ಥೆ ಮತ್ತು ಜಿಲ್ಲಾಡಳಿತದಿಂದ ತನಿಖೆಗಳು ನಡೆಯುತ್ತವೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಘಟನೆಯ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವಂತೆ ಡಿಸಿ ಮತ್ತು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm