ಬ್ರೇಕಿಂಗ್ ನ್ಯೂಸ್
01-08-20 11:53 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ (ಆ. 01): ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಶಿಪ್ಯಾರ್ಡ್ ಬಳಿ ಬೃಹತ್ ಕ್ರೇನ್ವೊಂದನ್ನು ಸ್ಥಾಪಿಸುವ ವೇಳೆ ಅದು ಕುಸಿದುಬಿದ್ದು ಹನ್ನೊಂದು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ
ದುರಂತ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನ ಕೈಗೊಂಡರೆನ್ನಲಾಗಿದೆ. ನಾಲ್ಕು ಮೃತ ದೇಹಗಳನ್ನ ಸದ್ಯ ಹೊರತೆಗೆಯಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ವಿಶಾಖಪಟ್ಟಣಂನ ಬಂದರಿನಲ್ಲಿರುವ ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಹಡಗುದಾಣದಲ್ಲಿ ನೂತನ ಕ್ರೇನ್ ಅನ್ನು ಇನ್ಸ್ಟಾಲ್ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅನುಪಮ್ ಹೆಸರಿನ ಈ ಕ್ರೇನ್ ಬರೋಬ್ಬರಿ 70 ಟನ್ ತೂಕ ಇದೆ. ಇದರ ಸಂಯೋಜನೆ ಎಲ್ಲವೂ ಆಗಿ ಪೂರ್ಣಪ್ರಮಾಣದ ಕಾರ್ಯಾಚರಣೆಗೆ ಇಳಿಸುವ ಮುನ್ನ ಟ್ರಯಲ್ ರನ್ ಮಾಡಲಾಗುತ್ತಿತ್ತು.
ಮೃತಪಟ್ಟವರಲ್ಲಿ ನಾಲ್ವರು ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಇನ್ನುಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ.
ಶಿಪ್ಯಾರ್ಡ್ ಸಂಸ್ಥೆ ಮತ್ತು ಜಿಲ್ಲಾಡಳಿತದಿಂದ ತನಿಖೆಗಳು ನಡೆಯುತ್ತವೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಘಟನೆಯ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವಂತೆ ಡಿಸಿ ಮತ್ತು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm