ಬ್ರೇಕಿಂಗ್ ನ್ಯೂಸ್
01-08-20 11:53 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ (ಆ. 01): ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಶಿಪ್ಯಾರ್ಡ್ ಬಳಿ ಬೃಹತ್ ಕ್ರೇನ್ವೊಂದನ್ನು ಸ್ಥಾಪಿಸುವ ವೇಳೆ ಅದು ಕುಸಿದುಬಿದ್ದು ಹನ್ನೊಂದು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ
ದುರಂತ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನ ಕೈಗೊಂಡರೆನ್ನಲಾಗಿದೆ. ನಾಲ್ಕು ಮೃತ ದೇಹಗಳನ್ನ ಸದ್ಯ ಹೊರತೆಗೆಯಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ವಿಶಾಖಪಟ್ಟಣಂನ ಬಂದರಿನಲ್ಲಿರುವ ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಹಡಗುದಾಣದಲ್ಲಿ ನೂತನ ಕ್ರೇನ್ ಅನ್ನು ಇನ್ಸ್ಟಾಲ್ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅನುಪಮ್ ಹೆಸರಿನ ಈ ಕ್ರೇನ್ ಬರೋಬ್ಬರಿ 70 ಟನ್ ತೂಕ ಇದೆ. ಇದರ ಸಂಯೋಜನೆ ಎಲ್ಲವೂ ಆಗಿ ಪೂರ್ಣಪ್ರಮಾಣದ ಕಾರ್ಯಾಚರಣೆಗೆ ಇಳಿಸುವ ಮುನ್ನ ಟ್ರಯಲ್ ರನ್ ಮಾಡಲಾಗುತ್ತಿತ್ತು.
ಮೃತಪಟ್ಟವರಲ್ಲಿ ನಾಲ್ವರು ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಇನ್ನುಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ.
ಶಿಪ್ಯಾರ್ಡ್ ಸಂಸ್ಥೆ ಮತ್ತು ಜಿಲ್ಲಾಡಳಿತದಿಂದ ತನಿಖೆಗಳು ನಡೆಯುತ್ತವೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಘಟನೆಯ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವಂತೆ ಡಿಸಿ ಮತ್ತು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm