ಬ್ರೇಕಿಂಗ್ ನ್ಯೂಸ್
01-08-20 11:53 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ (ಆ. 01): ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಶಿಪ್ಯಾರ್ಡ್ ಬಳಿ ಬೃಹತ್ ಕ್ರೇನ್ವೊಂದನ್ನು ಸ್ಥಾಪಿಸುವ ವೇಳೆ ಅದು ಕುಸಿದುಬಿದ್ದು ಹನ್ನೊಂದು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ
ದುರಂತ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನ ಕೈಗೊಂಡರೆನ್ನಲಾಗಿದೆ. ನಾಲ್ಕು ಮೃತ ದೇಹಗಳನ್ನ ಸದ್ಯ ಹೊರತೆಗೆಯಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ವಿಶಾಖಪಟ್ಟಣಂನ ಬಂದರಿನಲ್ಲಿರುವ ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಹಡಗುದಾಣದಲ್ಲಿ ನೂತನ ಕ್ರೇನ್ ಅನ್ನು ಇನ್ಸ್ಟಾಲ್ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅನುಪಮ್ ಹೆಸರಿನ ಈ ಕ್ರೇನ್ ಬರೋಬ್ಬರಿ 70 ಟನ್ ತೂಕ ಇದೆ. ಇದರ ಸಂಯೋಜನೆ ಎಲ್ಲವೂ ಆಗಿ ಪೂರ್ಣಪ್ರಮಾಣದ ಕಾರ್ಯಾಚರಣೆಗೆ ಇಳಿಸುವ ಮುನ್ನ ಟ್ರಯಲ್ ರನ್ ಮಾಡಲಾಗುತ್ತಿತ್ತು.
ಮೃತಪಟ್ಟವರಲ್ಲಿ ನಾಲ್ವರು ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಇನ್ನುಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ.
ಶಿಪ್ಯಾರ್ಡ್ ಸಂಸ್ಥೆ ಮತ್ತು ಜಿಲ್ಲಾಡಳಿತದಿಂದ ತನಿಖೆಗಳು ನಡೆಯುತ್ತವೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಘಟನೆಯ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವಂತೆ ಡಿಸಿ ಮತ್ತು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm