ಬ್ರೇಕಿಂಗ್ ನ್ಯೂಸ್
16-08-21 12:40 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 16: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದಲ್ಲಿ ಆಡಳಿತವನ್ನು ತಮ್ಮ ತೆಕ್ಕೆಗೆ ಪಡೆದುಕೊಂಡಿದ್ದು ಕಮಾಂಡರ್ ಮುಲ್ಲಾ ಅಬ್ದುಲ್ ಘನಿ ಅಫ್ಘಾನಿಸ್ತಾನದ ನೂತನ ಅಧ್ಯಕ್ಷರಾಗಲಿದ್ದಾರೆ ಎನ್ನಲಾಗುತ್ತಿದೆ. ಅಫ್ಘಾನಿಸ್ತಾನದ ಅಧ್ಯಕ್ಷರಾಗಿದ್ದ ಅಶ್ರಫ್ ಘನಿ, ಭಾನುವಾರ ರಾಜಧಾನಿ ಕಾಬೂಲನ್ನು ನಾಲ್ಕು ಸುತ್ತಲಿಂದಲೂ ತಾಲಿಬಾನ್ ಉಗ್ರರು ಆಕ್ರಮಿಸುತ್ತಿದ್ದಂತೆ ಅಧಿಕಾರ ತ್ಯಜಿಸಿ ಪರಾರಿಯಾಗಿದ್ದರು.
ಇದೇ ವೇಳೆ ಶಸ್ತ್ರಸಜ್ಜಿತ ತಾಲಿಬಾನ್ ಬಂಡುಕೋರರು ರಾಜಧಾನಿ ಕಾಬೂಲ್ ಪೂರ್ತಿಯಾಗಿ ಆಕ್ರಮಿಸಿಕೊಂಡಿದ್ದಾರೆ. ಆದರೆ ತಾಲಿಬಾನಿ ವಕ್ತಾರರು, ಬಂಡುಕೋರರು ಕಾಬೂಲ್ ನಗರವನ್ನು ಶಾಂತಿಯುತವಾಗಿ ಪ್ರವೇಶ ಮಾಡಿದ್ದಾರೆ. ನಾಗರಿಕರ ಮೇಲಾಗಲೀ, ಸೈನಿಕರ ಮೇಲಾಗಲೀ ದಾಳಿ ನಡೆಸಿಲ್ಲ ಎಂದು ತಿಳಿಸಿದ್ದಾರೆ.



ಅಫ್ಘಾನಿಸ್ತಾನದ ಗೃಹಸಚಿವ ಅಬ್ದುಲ್ ಸತ್ತಾರ್ ಅವರು ತಾಲಿಬಾನ್ ಗೆ ಶಾಂತಿಯುತವಾಗಿ ಅಧಿಕಾರ ಹಸ್ತಾಂತರ ಮಾಡುವುದಾಗಿ ತಿಳಿಸಿದ್ದಾರೆ. ತಾಲಿಬಾನ್ ಬಂಡುಕೋರರು ಅಫ್ಘಾನಿಸ್ತಾನ ರಾಜಧಾನಿ ಕಾಬೂಲಿಗೆ ನುಗ್ಗಿ ದಾಳಿ ನಡೆಸುವರೆಂಬ ಭೀತಿ ಎದುರಾಗಿತ್ತು. ಆ ಹಿನ್ನೆಲೆಯಲ್ಲಿ ಅಲ್ಲಿನ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಅದನ್ನು ಮನಗಂಡು ಅಬ್ದುಲ್ ಸತ್ತಾರ್ ಅವರು ತಾಲಿಬಾನ್ ಕಾಬೂಲ್ ಪ್ರವೇಶಿಸಿದಲ್ಲಿ ಆಫ್ಘನ್ ಭದ್ರತಾ ಪಡೆಗಳು ಕಾದಾಟ ನಡೆಸುವುದಿಲ್ಲ ಎನ್ನುವ ಸುಳಿವನ್ನು ನೀಡಿದ್ದರು.
ಇದೇ ವೇಳೆ, ದೇಶದ ಚುಕ್ಕಾಣಿ ಹಿಡಿಯಲು ತಾಲಿಬಾನ್ ಸಂಧಾನಕಾರರು ಮತ್ತು ಅಲ್ಲಿನ ಸರಕಾರದ ನಾಯಕರು ಅಧ್ಯಕ್ಷರ ನಿವಾಸದಲ್ಲಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಅಮೆರಿಕ ತನ್ನ ರಾಜತಾಂತ್ರಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕಾಬೂಲಿನಿಂದ ಹಿಂದಕ್ಕೆ ಕರೆಸಿಕೊಂಡಿದೆ. ಆದರೆ, ರಷ್ಯಾ ಮತ್ತು ಚೀನಾ ಕಾಬೂಲಿನಲ್ಲಿನ ತನ್ನ ರಾಜತಾಂತ್ರಿಕ ಅಧಿಕಾರಿಗಳನ್ನು ಹಿಂದಕ್ಕೆ ಕರೆಸಿಕೊಳ್ಳುವುದಿಲ್ಲ ಎಂದು ತಿಳಿಸಿದೆ.
With Taliban seizing control of Kabul and all top provincial capitals of Afghanistan, its top leader Mullah Abdul Ghani Baradar is most likely to become the next President of the war-ravaged nation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm