ಬ್ರೇಕಿಂಗ್ ನ್ಯೂಸ್
17-08-21 03:00 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 17: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಯಾವ ಪರಿಸ್ಥಿತಿ ಎದುರಾಗಿದೆ ಅಂದ್ರೆ, ಅಲ್ಲಿನ ಜನ ಭೀತಿಯಿಂದ ಬೇರೆ ದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜಧಾನಿ ಕಾಬೂಲ್ ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಸಿಕ್ಕ ಸಿಕ್ಕ ವಿಮಾನಗಳನ್ನು ಏರುತ್ತಿದ್ದಾರೆ. ಬಸ್ ಏರಿದಂತೆ ವಿಮಾನಗಳ ರೆಕ್ಕೆಯಲ್ಲಿ ಹತ್ತಿ ಕುಳಿತು ಕೆಳಗೆ ಬೀಳುತ್ತಿರುವ ವಿಡಿಯೋ ವೈರಲ್ ಆಗಿದ್ದವು. ಇದೀಗ ಅಲ್ಲಿನ ಒಟ್ಟು ಚಿತ್ರಣದ ಬಗ್ಗೆ ಸ್ಯಾಟಲೈಟ್ ಫೋಟೋಗಳು ಲಭ್ಯವಾಗಿವೆ.
ಜನರು ಆತಂಕಗೊಂಡು ಕಾಬೂಲಿನ ಹಮೀದ್ ಕರ್ಜಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿರುವುದು, ವಿಮಾನಗಳ ಹಿಂದೆ ಓಡುತ್ತಿರುವ ಸ್ಯಾಟಲೈಟ್ ಚಿತ್ರಗಳನ್ನು ಮಾಕ್ಸರ್ ಟೆಕ್ನಾಲಜೀಸ್ ಎನ್ನುವ ಸಂಸ್ಥೆಯೊಂದು ಬಿಡುಗಡೆ ಮಾಡಿದೆ. ಭೀತಿಯಿಂದ ಒಳಗೆ ಓಡಿಬರುತ್ತಿರುವ ಜನರನ್ನು ನಿಯಂತ್ರಣ ಮಾಡಲು ಅಲ್ಲಿನ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.





ಏರ್ಪೋರ್ಟ್ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರುಗಳು ಮುತ್ತಿಕೊಂಡಿದ್ದು ಒಳಗೆ ಬರಲು ಕ್ಯೂ ನಿಂತಿವೆ. ಇದೇ ವೇಳೆ, ಕಾರನ್ನು ರಸ್ತೆಯಲ್ಲೇ ನಿಲ್ಲಿಸಿ ಜನರು ಟರ್ಮಿನಲ್ ಒಳಗೆ ನುಗ್ಗುತ್ತಿದ್ದಾರೆ. ಅದಲ್ಲದೆ, ರಸ್ತೆಯಲ್ಲಿ ಕಾರುಗಳ ನಡುವೆಯೇ ಜನರು ಓಡಿಕೊಂಡು ಬರುತ್ತಿರುವುದು ಚಿತ್ರದಲ್ಲಿ ಸೆರೆಯಾಗಿದೆ.
ಏರ್ಪೋರ್ಟ್ ಟರ್ಮಿನಲ್ ಒಳಗೆ ವಿಮಾನ ಲ್ಯಾಂಡ್ ಆಗುವಲ್ಲಿ ಜನರ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಆದರೆ, ಟರ್ಮಿನಲ್ ಒಳಗಡೆಯೇ ಸಾವಿರಾರು ಜನರು ಸೇರಿರುವುದು ಸ್ಯಾಟಲೈಟ್ ಚಿತ್ರದಲ್ಲಿ ಸೆರೆಯಾಗಿದೆ.
Satellite images of the Kabul airport have captured how the desperate Afghans scrambled for rescue as chaos unfolded in the country.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm