ಬ್ರೇಕಿಂಗ್ ನ್ಯೂಸ್
06-09-20 02:38 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.6 :ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಭಾರತದಲ್ಲಿ ಶನಿವಾರ ಒಂದೇ ದಿನ 90 ಸಾವಿರಕ್ಕೂ ಅಧಿಕ ಕೊರೋನ ಪ್ರಕರಣಗಳು ವರದಿಯಾಗಿದ್ದು, ವಿಶ್ವದಲ್ಲಿ ಗರಿಷ್ಠ ಸೋಂಕು ದಾಖಲಾದ ದೇಶಗಳ ಪೈಕಿ ಭಾರತ ಬ್ರೆಝಿಲ್ ದೇಶವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದೆ. ಇದೀಗ ಅಮೆರಿಕದಲ್ಲಿ ಮಾತ್ರ ಭಾರತಕ್ಕಿಂತ ಹೆಚ್ಚು ಕೊರೋನ ವೈರಸ್ ಪ್ರಕರಣಗಳು ವರದಿಯಾಗಿವೆ.
ದೇಶದ ಒಟ್ಟು ಪ್ರಕರಣಗಳ ಪೈಕಿ ಶೇಕಡ 46ರಷ್ಟು ಹಾಗೂ ಒಟ್ಟು ಸಾವಿನ ಪೈಕಿ ಶೇಕಡ 52ರಷ್ಟು ಪಾಲು ಹೊಂದಿರುವ ಮಹಾರಾಷ್ಟ್ರ, ಆಂಧ್ರ ಪ್ರದೇಶ ಹಾಗೂ ಕರ್ನಾಟಕ, ಸಾಂಕ್ರಾಮಿಕ ಹರಡುವಿಕೆ ತಡೆಯಲು ಮತ್ತು ಸಾವಿನ ದರವನ್ನು ಶೇಕಡ 1ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ದೇಶದಲ್ಲಿ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 70 ಸಾವಿರ ದಾಟಿದ್ದು, ಕಳೆದ 10 ದಿನಗಳಲ್ಲಿ 10 ಸಾವಿರ ಸಾವು ಸಂಭವಿಸಿದೆ. ಶನಿವಾರ ರಾತ್ರಿ ವೇಳೆಗೆ ಒಟ್ಟು ಸೋಂಕಿತರ ಸಂಖ್ಯೆ 41 ಲಕ್ಷ ದಾಟಿದ್ದು, ಬ್ರೆಝಿಲ್ 40,93,586 ಪ್ರಕರಣಗಳೊಂದಿಗೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದು ವರ್ಲ್ಡೋಮೀಟರ್ಸ್.ಇನ್ಫೋ ಅಂಕಿ ಅಂಶ ಹೇಳಿದೆ.

ಬಿಹಾರದಲ್ಲಿ ಒಂಭತ್ತು ಮಂದಿ ಪ್ರಾಣ ಕಳೆದುಕೊಂಡಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 750ಕ್ಕೇರಿದೆ. ರಾಜ್ಯದಲ್ಲಿ 1,727 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,45,860ಕ್ಕೇರಿದೆ. ಅಸ್ಸಾಂನಲ್ಲಿ 2,698 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,23,922ಕ್ಕೇರಿದೆ. ರಾಜ್ಯದಲ್ಲಿ ಒಟ್ಟು 352 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಹಿಮಾಂತ ಬಿಸ್ವ ಶರ್ಮಾ ಪ್ರಕಟಿಸಿದ್ದಾರೆ. ಈ ಮಧ್ಯೆ ವಿಶ್ವಾದ್ಯಂತ 26.75 ದಶಲಕ್ಷ ಮಂದಿಗೆ ಸೋಂಕು ತಗಲಿದ್ದು, 8,75,419 ಮಂದಿ ಮೃತಪಟ್ಟಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm