ಬ್ರೇಕಿಂಗ್ ನ್ಯೂಸ್
06-09-20 02:38 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.6 :ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಭಾರತದಲ್ಲಿ ಶನಿವಾರ ಒಂದೇ ದಿನ 90 ಸಾವಿರಕ್ಕೂ ಅಧಿಕ ಕೊರೋನ ಪ್ರಕರಣಗಳು ವರದಿಯಾಗಿದ್ದು, ವಿಶ್ವದಲ್ಲಿ ಗರಿಷ್ಠ ಸೋಂಕು ದಾಖಲಾದ ದೇಶಗಳ ಪೈಕಿ ಭಾರತ ಬ್ರೆಝಿಲ್ ದೇಶವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದೆ. ಇದೀಗ ಅಮೆರಿಕದಲ್ಲಿ ಮಾತ್ರ ಭಾರತಕ್ಕಿಂತ ಹೆಚ್ಚು ಕೊರೋನ ವೈರಸ್ ಪ್ರಕರಣಗಳು ವರದಿಯಾಗಿವೆ.
ದೇಶದ ಒಟ್ಟು ಪ್ರಕರಣಗಳ ಪೈಕಿ ಶೇಕಡ 46ರಷ್ಟು ಹಾಗೂ ಒಟ್ಟು ಸಾವಿನ ಪೈಕಿ ಶೇಕಡ 52ರಷ್ಟು ಪಾಲು ಹೊಂದಿರುವ ಮಹಾರಾಷ್ಟ್ರ, ಆಂಧ್ರ ಪ್ರದೇಶ ಹಾಗೂ ಕರ್ನಾಟಕ, ಸಾಂಕ್ರಾಮಿಕ ಹರಡುವಿಕೆ ತಡೆಯಲು ಮತ್ತು ಸಾವಿನ ದರವನ್ನು ಶೇಕಡ 1ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ದೇಶದಲ್ಲಿ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 70 ಸಾವಿರ ದಾಟಿದ್ದು, ಕಳೆದ 10 ದಿನಗಳಲ್ಲಿ 10 ಸಾವಿರ ಸಾವು ಸಂಭವಿಸಿದೆ. ಶನಿವಾರ ರಾತ್ರಿ ವೇಳೆಗೆ ಒಟ್ಟು ಸೋಂಕಿತರ ಸಂಖ್ಯೆ 41 ಲಕ್ಷ ದಾಟಿದ್ದು, ಬ್ರೆಝಿಲ್ 40,93,586 ಪ್ರಕರಣಗಳೊಂದಿಗೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದು ವರ್ಲ್ಡೋಮೀಟರ್ಸ್.ಇನ್ಫೋ ಅಂಕಿ ಅಂಶ ಹೇಳಿದೆ.

ಬಿಹಾರದಲ್ಲಿ ಒಂಭತ್ತು ಮಂದಿ ಪ್ರಾಣ ಕಳೆದುಕೊಂಡಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 750ಕ್ಕೇರಿದೆ. ರಾಜ್ಯದಲ್ಲಿ 1,727 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,45,860ಕ್ಕೇರಿದೆ. ಅಸ್ಸಾಂನಲ್ಲಿ 2,698 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,23,922ಕ್ಕೇರಿದೆ. ರಾಜ್ಯದಲ್ಲಿ ಒಟ್ಟು 352 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಹಿಮಾಂತ ಬಿಸ್ವ ಶರ್ಮಾ ಪ್ರಕಟಿಸಿದ್ದಾರೆ. ಈ ಮಧ್ಯೆ ವಿಶ್ವಾದ್ಯಂತ 26.75 ದಶಲಕ್ಷ ಮಂದಿಗೆ ಸೋಂಕು ತಗಲಿದ್ದು, 8,75,419 ಮಂದಿ ಮೃತಪಟ್ಟಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm