ಬ್ರೇಕಿಂಗ್ ನ್ಯೂಸ್
20-08-21 12:47 pm Headline Karnataka News Network ದೇಶ - ವಿದೇಶ
ಅಂತರ್ ಸರ್ಕಾರಿ ಸಮಿತಿಯನ್ನು ಆಧರಿಸಿದ ಇತ್ತೀಚಿನ ವಿಶ್ವಸಂಸ್ಥೆ ಹವಾಮಾನ ವರದಿ ಅಪಾಯಕಾರಿ ಮಾಹಿತಿ ನೀಡಿದ್ದು ಹವಾಮಾನ ಬದಲಾವಣೆಯ ಕುರಿತು ಎಚ್ಚರಿಕೆ ನೀಡಿದೆ. ಈ ವರದಿಯ ಪ್ರಕಾರ 2030ರ ಸುಮಾರಿಗೆ ಪ್ರಪಂಚವು 1.5 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳಕ್ಕೆ ಒಳಗಾಗಲಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ವಿಶ್ವಸಂಸ್ಥೆ ತಿಳಿಸಿರುವ ಪ್ರಕಾರ ಹವಾಮಾನ ಬದಲಾವಣೆ ನೈಸರ್ಗಿಕ ವಿಕೋಪವಾಗಿದ್ದು ಅಧಿಕ ಮಳೆ, ಚಂಡಮಾರುತ, ಸುನಾಮಿಯಂತೆಯೇ ಹವಾಮಾನ ವೈಪರೀತ್ಯ ಕೂಡ ಪ್ರಾಕೃತಿಕ ವಿಕೋಪವಾಗಿದೆ ಎಂಬುದಾಗಿ ತಿಳಿಸಿದೆ.
ಇದರ ನಡುವೆಯೇ ಆಫ್ರಿಕಾ ಜನರು ನೈಸರ್ಗಿಕ ವಿಕೋಪ ತಡೆಯುವ ನಿಟ್ಟಿನಲ್ಲಿ ಕೈಜೋಡಿಸಿದ್ದು ಹಳ್ಳಿಗರ ಈ ಬುದ್ಧಿವಂತಿಕೆಗೆ ಸಂಪೂರ್ಣ ವಿಶ್ವವೇ ತಲೆದೂಗಿದೆ. ತೋಟಗಾರಿಕೆಯಲ್ಲಿ ಇವರು ವಿನೂತನ ಮಾದರಿ ಅನುಸರಿಸಿದ್ದು ವೃತ್ತಾಕಾರವಾಗಿ ಸಸಿಗಳನ್ನು ನೆಟ್ಟು ತೋಟಗಾರಿಕೆ ಮಾಡುತ್ತಿದ್ದಾರೆ. ಬೆಳೆಗಳ ಒಂದು ವರ್ತುಲದಂತೆ ಈ ತೋಟಗಳು ಕಾಣುತ್ತಿದ್ದು ಇದರಿಂದ ಹವಾಮಾನ ವೈಪರೀತ್ಯ ತಡೆಗಟ್ಟಬಹುದು ಎಂಬುದು ತಿಳಿದು ಬಂದಿದೆ.



ಈ ತೋಟಗಾರಿಕೆಯ ಹಿಂದಿರುವ ವ್ಯಕ್ತಿ ಸೆನೆಗಲ್ನ ಮೌಸ್ಸಾ ಕಮಾರಾ. ರಾಯಿಟರ್ಸ್ ಸುದ್ದಿ ಸಂಸ್ಥೆ ಇವರ ತೋಟಗಾರಿಕೆಯ ಕುರಿತು ವರದಿ ಮಾಡಿದ್ದು, ಸೆನೆಗಲ್ನ ವೊಲೊಫ್ ಭಾಷೆಯಲ್ಲಿ ಇಂತಹ ತೋಟಗಾರಿಕೆಗೆ ‘ಟೊಲೌ ಕೂರ್’ ಎಂದು ಹೆಸರಿಸಲಾಗಿದೆ. ಈ ರೀತಿಯ ತೋಟಗಾರಿಕೆಯು ಆಹಾರ ಭದ್ರತೆಯನ್ನು ವರ್ಧಿಸುತ್ತದೆ ಎಂದು ತಿಳಿಸಿದ್ದು ಪ್ರಾದೇಶಿಕ ಬರಗಾಲ, ಅರಣ್ಯನಾಶ ಹಾಗೂ ಫಲವತ್ತಾದ ಭೂಮಿಯು ಮರುಭೂಮಿಯಾಗುವುದನ್ನು ತಡೆಯುತ್ತದೆ. ಈ ರೀತಿಯಾಗಿ ಸಾವಿರಾರು ಸಮುದಾಯದವರಿಗೆ ಉದ್ಯೋಗ ದೊರೆಯುತ್ತದೆ ಎಂಬುದು ಕಮಾರಾ ಅಭಿಪ್ರಾಯವಾಗಿದೆ.
ಈ ಯೋಜನೆ ಅತ್ಯಂತ ಮಹತ್ವದ್ದಾಗಿದ್ದು ಇದರಿಂದ ದೊರೆಯುವ ಪ್ರಯೋಜನವನ್ನು ಮಾತುಗಳಲ್ಲಿ ವರ್ಣಿಸಲಾಗುವುದಿಲ್ಲ ಎಂದು ಅಭಿಪ್ರಾಯ ನೀಡಿದ್ದಾರೆ. ಬೇಕರಿಯಲ್ಲಿ ಕೆಲಸ ಮಾಡುವುದರ ಜತೆಗೆ ತೋಟದಲ್ಲಿ ತಿನ್ನಲು ಯೋಗ್ಯವಾಗಿರುವ ಹಾಗೂ ಔಷಧೀಯ ಸಸ್ಯಗಳನ್ನು ಬೆಳೆಸುತ್ತಿದ್ದಾರೆ.

2007ರಲ್ಲಿ ಆರಂಭವಾದ ಗ್ರೀನ್ ವಾಲ್ ಯೋಜನೆಯ ಭಾಗವಾಗಿ ಕಮಾರಾ ಕಾರ್ಯನಿರ್ವಹಿಸುತ್ತಿದ್ದಾರೆ. ಹವಾಮಾನ ವೈಪರೀತ್ಯ ಹಾಗೂ ಇನ್ನಿತರ ಪ್ರಾಕೃತಿಕ ವಿಕೋಪಗಳಿಂದಾಗಿ ಫಲವತ್ತಾಗಿರುವ ಭೂಮಿ ಮರುಭೂಮಿಯಾಗಿ ಮಾರ್ಪಡುತ್ತಿದೆ. ಗ್ರೀನ್ ವಾಲ್ ಯೋಜನೆಯು ಇಂತಹ ಸವಾಲುಗಳನ್ನು ಎದುರಿಸುವ ಆಶಾಕಿರಣವಾಗಿ ರೂಪುಗೊಂಡಿದೆ. ಆಫ್ರಿಕಾ ಸಂಘಟನೆಯು 2007ರಲ್ಲಿ ಆರಂಭಿಸಿದ ಈ ಯೋಜನೆ ಪ್ರಸ್ತುತ ವಿಶ್ವದ ಅತ್ಯಂತ ಬಡ ದೇಶಗಳಲ್ಲೊಂದಾದ ಸಹೇಲ್ನಲ್ಲಿ ಹದಗೆಟ್ಟ ಕೃಷಿ ಭೂಮಿ ಫಲವತ್ತಾಗಿಸಲು ಜೊತೆಗೆ ಲಕ್ಷಾಂತರ ಜೀವಗಳನ್ನು ಬರದಿಂದ ಬಡತನದಿಂದ ಸಂರಕ್ಷಿಸುವ ಗುರಿ ಹೊಂದಿದೆ.



ಗ್ರೀನ್ ವಾಲ್ ಯೋಜನೆಯು ಒಮ್ಮೆ ಪೂರ್ಣಗೊಂಡ ನಂತರ ಅತಿದೊಡ್ಡ ಜೀವವಿಕಾಸ ಗೋಡೆ ಎಂಬುದಾಗಿ ಖ್ಯಾತಿಗಳಿಸಲಿದೆ. ವಿಶ್ವದ 8,000 ಕಿಮೀ ಉದ್ದದ ನೈಸರ್ಗಿಕ ಅದ್ಭುತವು ಆಫ್ರಿಕಾ ಖಂಡವನ್ನು ಸಂಪೂರ್ಣವಾಗಿ ವ್ಯಾಪಿಸಲಿದೆ. ಕೋವಿಡ್ ಸಾಂಕ್ರಾಮಿಕದ ನಂತರ ಈ ಯೋಜನೆ ಲಕ್ಷಾಂತರ ಜನರಿಗೆ ಉದ್ಯೋಗವನ್ನು ನೀಡಿದೆ. ಸೆನೆಗಲ್ ಸಾಂಕ್ರಾಮಿಕದ ಭೀತಿಯಿಂದಾಗಿ ತನ್ನ ಗಡಿಗಳನ್ನು ಮುಚ್ಚಿತು ಹಾಗೂ ಆಮದುಗಳನ್ನು ಕಡಿತಗೊಳಿಸಿತು ಜೊತೆಗೆ ವಿದೇಶಿ ಆಹಾರ ಮತ್ತು ಔಷಧಿಯ ಮೇಲೆ ಗ್ರಾಮೀಣ ಸಮುದಾಯಗಳ ಅವಲಂಬನೆಯನ್ನು ಬಹಿರಂಗಪಡಿಸಿತು. ಇದರಿಂದಾಗಿ ಮರು ಅರಣ್ಯೀಕರಣ ಸಂಸ್ಥೆಗಳು ಹಳ್ಳಿಗರು ಸ್ವಾವಲಂಬಿಯಾಗಲು ಸಹಕಾರ ನೀಡುವ ವಿಧಾನಗಳನ್ನು ಹುಡುಕಲು ಪ್ರೇರೇಪಿಸಿತು.
ಹವಾಮಾನ ವೈಪರೀತ್ಯಗಳಿಂದ ಬಂಜರು ಭೂಮಿಯ ಸಂಕಷ್ಟವನ್ನು ಎದುರಿಸುತ್ತಿರುವ ಸಹೇಲ್ ಪ್ರದೇಶವು ಈಗಾಗಲೇ ಬರಗಾಲ, ಆಹಾರದ ಕೊರತೆ, ನೈಸರ್ಗಿಕ ಸಂಪನ್ಮೂಲಗಳ ಇಳಿಕೆ ಮೊದಲಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಾಗಾಗಿ ಗ್ರೀನ್ ವಾಲ್ ಯೋಜನೆಯು ಗ್ರಾಮೀಣ ಜನರಿಗೆ ಸ್ವಾವಲಂಬಿಯಾಗುವ ದಾರಿಯನ್ನು ತೋರಿಸಿದ್ದು ನೈಸರ್ಗಿಕ ಸಂರಕ್ಷಣೆಗೂ ರಹದಾರಿಯಾಗಿದೆ ಎಂಬುದಾಗಿ ವೆಬ್ಸೈಟ್ ಹೇಳಿಕೆ ನೀಡಿದೆ.
Great Green Wall Farmers in Senegal Growing Circular Gardens to fight Climate change.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm