ಬ್ರೇಕಿಂಗ್ ನ್ಯೂಸ್
21-08-21 04:07 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 21: ಅಫ್ಘಾನಿಸ್ತಾನದ ಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ರಾಜಧಾನಿ ಕಾಬೂಲ್ ನಲ್ಲಿರುವ ಏರ್ಪೋರ್ಟ್ ಬಳಿಯಿಂದ 150ರಷ್ಟು ಭಾರತೀಯರನ್ನು ತಾಲಿಬಾನಿ ಪಡೆಗಳು ಅಪಹರಿಸಿವೆ ಎನ್ನುವ ಮಾಹಿತಿ ಹೊರಬಿದ್ದಿದೆ. ಆದರೆ, ಈ ವರದಿಯನ್ನು ಭಾರತ ಸರಕಾರ ನಿರಾಕರಿಸಿದ್ದು, ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದೆ. ಅಲ್ಲದೆ, ತಾಲಿಬಾನ್ ವಕ್ತಾರರು ಕೂಡ ಇದೇ ಮಾತನ್ನು ಹೇಳಿದ್ದು, ಯಾವುದೇ ಭಾರತೀಯರನ್ನು ನಾವು ಅಪಹರಿಸಿಲ್ಲ ಎಂದಿದ್ದಾರೆ.
ಅಫ್ಘಾನಿಸ್ತಾನದ ಪತ್ರಕರ್ತರು ಈ ಕುರಿತು ಸುದ್ದಿ ಹರಿಯಬಿಟ್ಟಿದ್ದಾರೆ. 100ರಿಂದ 150ರಷ್ಟು ಮಂದಿ ಭಾರತೀಯರನ್ನು ಹಮೀದ್ ಕರ್ಜಾಯಿ ಏರ್ಪೋರ್ಟ್ ಬಳಿಯಿಂದ ತಾಲಿಬಾನಿಗಳು ಕಿಡ್ನಾಪ್ ಮಾಡಿದ್ದಾಗಿ ತಿಳಿಸಿದ್ದಾರೆ. ಈ ಸುದ್ದಿ ಬಿತ್ತರವಾಗುತ್ತಲೇ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಕೇಳಿಬಂದಿದೆ. ಆನಂತರ ಸ್ಥಳೀಯ ಕೆಲವು ಮಾಧ್ಯಮಗಳು, ಹಾಗೇನೂ ನಡೆದಿಲ್ಲ. ಅವರನ್ನು ಸುರಕ್ಷಿತವಾಗಿ ಏರ್ಪೋರ್ಟ್ ಆವರಣದಲ್ಲಿ ಬಿಡಲಾಗಿದೆ. ತಾಲಿಬಾನ್ ಪಡೆಗಳು ವಿಚಾರಣೆಗಾಗಿ ಹಲವರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದ್ದಾರೆ ಎಂದು ಹೇಳಿವೆ.


ಆದರೆ, ಈ ವಿಚಾರದಲ್ಲಿ ಅಮೆರಿಕದ ನ್ಯಾಟೋ ಪಡೆಗಳಾಗಲೀ, ಭಾರತ ಸರಕಾರದಿಂದಾಗಲೀ ಅಧಿಕೃತ ಹೇಳಿಕೆ ಬಂದಿಲ್ಲ. ಭಾರತ ಸರಕಾರ ಒಟ್ಟು ವಿಚಾರದ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ಅಫ್ಘಾನಿಸ್ತಾನದ ಪ್ರಜೆಗಳು, ಭಾರತೀಯರು ಸೇರಿ 150ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಅಫ್ಘನ್ ಸಿಖ್ಖರು ಕೂಡ ಇದ್ದಾರೆ. ಇದೇ ವೇಳೆ, ಭಾರತ ಮೂಲದ ಒಬ್ಬಾತ ತನ್ನ ಪತ್ನಿಯ ಜೊತೆಗೆ ಅವರ ಕೈಯಿಂದ ತಪ್ಪಿಸಿಕೊಂಡು ಬಂದಿದ್ದು, ಈ ಬಗ್ಗೆ ಹೊರಗಿನವರಿಗೆ ತಿಳಿಸಿದ್ದಾನೆ ಎನ್ನಲಾಗುತ್ತಿದೆ.
ಇವರೆಲ್ಲ ಇಂದು ಮಧ್ಯಾಹ್ನ ಏರ್ಪೋರ್ಟ್ ಒಳಹೋಗಲು ಯತ್ನಿಸಿದ್ದರು. ಅಲ್ಲಿ ಸೂಕ್ತ ಸಂವಹನ ಸಾಧ್ಯವಾಗದೆ, ಒಳಗೆ ಬಿಟ್ಟಿರಲಿಲ್ಲ. ಇದೇ ವೇಳೆ, ಒಂದಷ್ಟು ಶಸ್ತ್ರ ರಹಿತ ತಾಲಿಬಾನ್ ಸದಸ್ಯರು ಅಲ್ಲಿಗೆ ಬಂದಿದ್ದು ಅಲ್ಲಿದ್ದವರಿಗೆ ಥಳಿಸಿ ಕಾಬೂಲಿನ ತರಾಖಿಲ್ ಎಂಬಲ್ಲಿಗೆ ಕರೆದೊಯ್ದಿದ್ದಾರೆ. ಇದೇ ವೇಳೆ, ಇಬ್ಬರು ಗುಂಪಿನಿಂದ ಹೊರಬಂದಿದ್ದು, ಅಲ್ಲಿಂದ ಪಾರಾಗಿದ್ದಾರೆ. ಉಳಿದವರ ಬಗ್ಗೆ ಹೆಚ್ಚು ಗೊತ್ತಿಲ್ಲ. ಇನ್ನೊಂದು ಗೇಟ್ ಮೂಲಕ ಹೊರಕ್ಕೆ ಒಯ್ದಿದ್ದಾರೆ ಎಂದು ತಿಳಿಸಿದ್ದಾನೆ.
All Indians citizens in Kabul awaiting evacuation are safe. They were offered lunch and have now left for Kabul airport: Government sources
— ANI (@ANI) August 21, 2021
Taliban have denied reports that they have captured 150 people, most of them Indian nationals, from near Hamid Karzai International Airport in Kabul. All Indians are safe, Indian government sources said.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am