ಬ್ರೇಕಿಂಗ್ ನ್ಯೂಸ್
            
                        26-08-21 01:24 pm Headline Karnataka News Network ದೇಶ - ವಿದೇಶ
            ನವದೆಹಲಿ, ಆಗಸ್ಟ್ 26: ಸುಪ್ರೀಂ ಕೋರ್ಟ್ ಕೊಲಿಜಿಯಂ ಪ್ಯಾನೆಲ್ ಶಿಫಾರಸು ಮಾಡಿರುವ ಒಂಬತ್ತು ಮಂದಿ ನ್ಯಾಯಾಧೀಶರ ಪಟ್ಟಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ಪೈಕಿ ಮೂವರು ಮಹಿಳಾ ನ್ಯಾಯಾಧೀಶರಿದ್ದಾರೆ. ಎಲ್ಲವೂ ಅಂದ್ಕೊಂಡಂತೇ ಆದರೆ, 2027ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಮಹಿಳೆಯೊಬ್ಬರು ಆಯ್ಕೆಯಾಗಲಿದ್ದಾರೆ. ಆ ಹೆಗ್ಗಳಿಕೆ ಕರ್ನಾಟಕದ ಕನ್ನಡಿಗ ಮಹಿಳೆಯೊಬ್ಬರಿಗೆ ಸಿಗಲಿದೆ ಎನ್ನುವುದು ಮಹತ್ವದ ಅಂಶ.

ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶ ಎ.ಎಸ್.ಓಕಾ, ನ್ಯಾಯಾಧೀಶೆ ಬಿ.ವಿ.ನಾಗರತ್ನ, ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆ ಹಿಮಾ ಕೊಹ್ಲಿ, ಗುಜರಾತ್ ಹೈಕೋರ್ಟಿನ ವಿಕ್ರಮ್ ನಾಥ್, ಸಿಕ್ಕಿಂ ಹೈಕೋರ್ಟಿನ ಮುಖ್ಯ ನ್ಯಾಯಾಧೀಶೆ ಜೆ.ಕೆ.ಮಹೇಶ್ವರಿ, ಕೇರಳ ಹೈಕೋರ್ಟಿನ ಸಿ.ಟಿ.ರವಿಕುಮಾರ್, ಮದ್ರಾಸ್ ಹೈಕೋರ್ಟಿನ ಎಂ.ಎಂ.ಸುಂದರೇಶ್, ಗುಜರಾತ್ ಹೈಕೋರ್ಟ್ ನ್ಯಾಯಾಧೀಶ ಬೇಳ ಎಂ. ತ್ರಿವೇದಿ ಮತ್ತು ಹಿರಿಯ ವಕೀಲರಾಗಿರುವ ಪಿ.ಎಸ್. ನರಸಿಂಹ ಅವರನ್ನು ಕೊಲಿಜಿಯಂ ಸುಪ್ರೀಕೋರ್ಟಿಗೆ ಶಿಫಾರಸು ಮಾಡಿತ್ತು.
ಪ್ರಸಕ್ತ ಸುಪ್ರೀಂ ಕೋರ್ಟ್ ನಲ್ಲಿ 24 ಮಂದಿ ನ್ಯಾಯಾಧೀಶರಿದ್ದಾರೆ. ಈಗ ಒಂಬತ್ತು ಮಂದಿಯ ಸೇರ್ಪಡೆಯಾಗಿದ್ದು, ಇನ್ನೊಂದು ಸ್ಥಾನ ಖಾಲಿಯಿದೆ. ಈಗ ಶಿಫಾರಸು ಆಗಿರುವ ಮೂವರು ಮಹಿಳಾ ನ್ಯಾಯಾಧೀಶರಲ್ಲಿ ಬಿ.ವಿ.ನಾಗರತ್ನ ಹಿರಿಯರಾಗಿದ್ದು, 2027ರಲ್ಲಿ ಭಾರತದ ಮುಖ್ಯ ನ್ಯಾಯಾಧೀಶ ಹುದ್ದೆಗೇರಲಿದ್ದಾರೆ. ಅದಲ್ಲದೆ, ಮೊಟ್ಟಮೊದಲ ಬಾರಿಗೆ ಮಹಿಳೆಯೊಬ್ಬರು ನ್ಯಾಯಾಂಗದ ಅತ್ಯುನ್ನತ ಸ್ಥಾನ ಅಲಂಕರಿಸಲಿದ್ದಾರೆ.

1950, ಜನವರಿ 26ರಂದು ಸುಪ್ರೀಂ ಕೋರ್ಟ್ ಅಸ್ತಿತ್ವಕ್ಕೆ ಬಂದ 70 ವರ್ಷಗಳಲ್ಲಿ ಕೇವಲ ಎಂಟು ಮಂದಿ ಮಹಿಳೆಯರಷ್ಟೇ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. 1989ರಲ್ಲಿ ಫಾತಿಮಾ ಬೀವಿ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಪೀಠದಲ್ಲಿ ನ್ಯಾಯಾಧೀಶ ಹುದ್ದೆಗೇರಿದ್ದರು.
1962, ಅಕ್ಟೋಬರ್ 30ರಂದು ಜನಿಸಿದ್ದ ಬಿ.ವಿ.ನಾಗರತ್ನ, ಸುಪ್ರೀಂ ಕೋರ್ಟಿನಲ್ಲಿ ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾಗಿರುವ ಇ.ಎಸ್.ವೆಂಕಟ್ರಾಮಯ್ಯ ಅವರ ಪುತ್ರಿ. 1987ರ ಅಕ್ಟೋಬರ್ 28ರಂದು ಬೆಂಗಳೂರು ಹೈಕೋರ್ಟಿನಲ್ಲಿ ವಕೀಲರಾಗಿ ಸೇವೆ ಆರಂಭಿಸಿದ್ದರು.
            
            
            The Centre has approved all nine names recommended by the Supreme Court Collegium for appointment to the top court. Among the approved names is Justice Nagarathna, who can go on to become the country’s first woman CJI in 2027
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm