ಬ್ರೇಕಿಂಗ್ ನ್ಯೂಸ್
26-08-21 01:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 26: ಸುಪ್ರೀಂ ಕೋರ್ಟ್ ಕೊಲಿಜಿಯಂ ಪ್ಯಾನೆಲ್ ಶಿಫಾರಸು ಮಾಡಿರುವ ಒಂಬತ್ತು ಮಂದಿ ನ್ಯಾಯಾಧೀಶರ ಪಟ್ಟಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ಪೈಕಿ ಮೂವರು ಮಹಿಳಾ ನ್ಯಾಯಾಧೀಶರಿದ್ದಾರೆ. ಎಲ್ಲವೂ ಅಂದ್ಕೊಂಡಂತೇ ಆದರೆ, 2027ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಮಹಿಳೆಯೊಬ್ಬರು ಆಯ್ಕೆಯಾಗಲಿದ್ದಾರೆ. ಆ ಹೆಗ್ಗಳಿಕೆ ಕರ್ನಾಟಕದ ಕನ್ನಡಿಗ ಮಹಿಳೆಯೊಬ್ಬರಿಗೆ ಸಿಗಲಿದೆ ಎನ್ನುವುದು ಮಹತ್ವದ ಅಂಶ.

ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶ ಎ.ಎಸ್.ಓಕಾ, ನ್ಯಾಯಾಧೀಶೆ ಬಿ.ವಿ.ನಾಗರತ್ನ, ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆ ಹಿಮಾ ಕೊಹ್ಲಿ, ಗುಜರಾತ್ ಹೈಕೋರ್ಟಿನ ವಿಕ್ರಮ್ ನಾಥ್, ಸಿಕ್ಕಿಂ ಹೈಕೋರ್ಟಿನ ಮುಖ್ಯ ನ್ಯಾಯಾಧೀಶೆ ಜೆ.ಕೆ.ಮಹೇಶ್ವರಿ, ಕೇರಳ ಹೈಕೋರ್ಟಿನ ಸಿ.ಟಿ.ರವಿಕುಮಾರ್, ಮದ್ರಾಸ್ ಹೈಕೋರ್ಟಿನ ಎಂ.ಎಂ.ಸುಂದರೇಶ್, ಗುಜರಾತ್ ಹೈಕೋರ್ಟ್ ನ್ಯಾಯಾಧೀಶ ಬೇಳ ಎಂ. ತ್ರಿವೇದಿ ಮತ್ತು ಹಿರಿಯ ವಕೀಲರಾಗಿರುವ ಪಿ.ಎಸ್. ನರಸಿಂಹ ಅವರನ್ನು ಕೊಲಿಜಿಯಂ ಸುಪ್ರೀಕೋರ್ಟಿಗೆ ಶಿಫಾರಸು ಮಾಡಿತ್ತು.
ಪ್ರಸಕ್ತ ಸುಪ್ರೀಂ ಕೋರ್ಟ್ ನಲ್ಲಿ 24 ಮಂದಿ ನ್ಯಾಯಾಧೀಶರಿದ್ದಾರೆ. ಈಗ ಒಂಬತ್ತು ಮಂದಿಯ ಸೇರ್ಪಡೆಯಾಗಿದ್ದು, ಇನ್ನೊಂದು ಸ್ಥಾನ ಖಾಲಿಯಿದೆ. ಈಗ ಶಿಫಾರಸು ಆಗಿರುವ ಮೂವರು ಮಹಿಳಾ ನ್ಯಾಯಾಧೀಶರಲ್ಲಿ ಬಿ.ವಿ.ನಾಗರತ್ನ ಹಿರಿಯರಾಗಿದ್ದು, 2027ರಲ್ಲಿ ಭಾರತದ ಮುಖ್ಯ ನ್ಯಾಯಾಧೀಶ ಹುದ್ದೆಗೇರಲಿದ್ದಾರೆ. ಅದಲ್ಲದೆ, ಮೊಟ್ಟಮೊದಲ ಬಾರಿಗೆ ಮಹಿಳೆಯೊಬ್ಬರು ನ್ಯಾಯಾಂಗದ ಅತ್ಯುನ್ನತ ಸ್ಥಾನ ಅಲಂಕರಿಸಲಿದ್ದಾರೆ.

1950, ಜನವರಿ 26ರಂದು ಸುಪ್ರೀಂ ಕೋರ್ಟ್ ಅಸ್ತಿತ್ವಕ್ಕೆ ಬಂದ 70 ವರ್ಷಗಳಲ್ಲಿ ಕೇವಲ ಎಂಟು ಮಂದಿ ಮಹಿಳೆಯರಷ್ಟೇ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. 1989ರಲ್ಲಿ ಫಾತಿಮಾ ಬೀವಿ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಪೀಠದಲ್ಲಿ ನ್ಯಾಯಾಧೀಶ ಹುದ್ದೆಗೇರಿದ್ದರು.
1962, ಅಕ್ಟೋಬರ್ 30ರಂದು ಜನಿಸಿದ್ದ ಬಿ.ವಿ.ನಾಗರತ್ನ, ಸುಪ್ರೀಂ ಕೋರ್ಟಿನಲ್ಲಿ ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾಗಿರುವ ಇ.ಎಸ್.ವೆಂಕಟ್ರಾಮಯ್ಯ ಅವರ ಪುತ್ರಿ. 1987ರ ಅಕ್ಟೋಬರ್ 28ರಂದು ಬೆಂಗಳೂರು ಹೈಕೋರ್ಟಿನಲ್ಲಿ ವಕೀಲರಾಗಿ ಸೇವೆ ಆರಂಭಿಸಿದ್ದರು.
The Centre has approved all nine names recommended by the Supreme Court Collegium for appointment to the top court. Among the approved names is Justice Nagarathna, who can go on to become the country’s first woman CJI in 2027
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 08:01 pm
HK News Staffer
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 06:18 pm
HK News Staffer
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm